<p><strong>ನಾಯಕನಹಟ್ಟಿ:</strong> ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಸಿಮೆಂಟ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.</p>.<p>ನಾಯಕನಹಟ್ಟಿ ಹೋಬಳಿಯ ಗಜ್ಜುಗಾನಹಳ್ಳಿ ಗ್ರಾಮದ ಪ್ರಕಾಶ್ ಗಾಯಗೊಂಡ ಸವಾರ.</p>.<p>ಗುರುವಾರ ಪ್ರಕಾಶ್ ಮತ್ತು ಆತನ ಸ್ನೇಹಿತ ಚಳ್ಳಕೆರೆಯಿಂದ ಗಜ್ಜುಗನಹಳ್ಳಿ ಗ್ರಾಮಕ್ಕೆ ತೆರಳುವಾಗ ಚಳ್ಳಕೆರೆ ಸಮೀಪದ ಹೊಸೂರು ಬಳಿ ಬರುವಾಗ ಇಳಿಜಾರಿಗೆ ವೇಗವಾಗಿ ಸಾಗಿದ ಬೈಕ್ ನಿಯಂತ್ರಣತಪ್ಪಿ ಸಿಮೆಂಟ್ ಕಂಬಕ್ಕೆ ಬೈಕ್ ಅಪ್ಪಳಿಸಿದೆ. ಪರಿಣಾಮ ಬೈಕ್ ಸವಾರನ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದಿದೆ.</p>.<p class="Subhead"><strong>ನೆರವಿಗೆ ಧಾವಿಸಿದ ಎನ್.ರಘುಮೂರ್ತಿ: </strong>ಹೊಸವರ್ಷದ ನಿಮಿತ್ತ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಬಂದಿದ್ದ ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಮರಳಿ ಚಳ್ಳಕೆರೆಗೆ ತೆರಳುತ್ತಿರುವಾಗ ಈ ಬೈಕ್ ಅಪಘಾತ ನಡೆದಿದೆ. ಅಪಘಾತದಿಂದ ನರಳುತ್ತಿದ್ದ ವ್ಯಕ್ತಿಯನ್ನು ಉಪಚರಿಸಿ ಆಂಬುಲೆನ್ಸ್ ಬರುವುದು ತಡವಾಗುತ್ತದೆ ಎಂದು ತಮ್ಮ ಕಾರಿನಲ್ಲಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸಗೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ:</strong> ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಸಿಮೆಂಟ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.</p>.<p>ನಾಯಕನಹಟ್ಟಿ ಹೋಬಳಿಯ ಗಜ್ಜುಗಾನಹಳ್ಳಿ ಗ್ರಾಮದ ಪ್ರಕಾಶ್ ಗಾಯಗೊಂಡ ಸವಾರ.</p>.<p>ಗುರುವಾರ ಪ್ರಕಾಶ್ ಮತ್ತು ಆತನ ಸ್ನೇಹಿತ ಚಳ್ಳಕೆರೆಯಿಂದ ಗಜ್ಜುಗನಹಳ್ಳಿ ಗ್ರಾಮಕ್ಕೆ ತೆರಳುವಾಗ ಚಳ್ಳಕೆರೆ ಸಮೀಪದ ಹೊಸೂರು ಬಳಿ ಬರುವಾಗ ಇಳಿಜಾರಿಗೆ ವೇಗವಾಗಿ ಸಾಗಿದ ಬೈಕ್ ನಿಯಂತ್ರಣತಪ್ಪಿ ಸಿಮೆಂಟ್ ಕಂಬಕ್ಕೆ ಬೈಕ್ ಅಪ್ಪಳಿಸಿದೆ. ಪರಿಣಾಮ ಬೈಕ್ ಸವಾರನ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದಿದೆ.</p>.<p class="Subhead"><strong>ನೆರವಿಗೆ ಧಾವಿಸಿದ ಎನ್.ರಘುಮೂರ್ತಿ: </strong>ಹೊಸವರ್ಷದ ನಿಮಿತ್ತ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಬಂದಿದ್ದ ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಮರಳಿ ಚಳ್ಳಕೆರೆಗೆ ತೆರಳುತ್ತಿರುವಾಗ ಈ ಬೈಕ್ ಅಪಘಾತ ನಡೆದಿದೆ. ಅಪಘಾತದಿಂದ ನರಳುತ್ತಿದ್ದ ವ್ಯಕ್ತಿಯನ್ನು ಉಪಚರಿಸಿ ಆಂಬುಲೆನ್ಸ್ ಬರುವುದು ತಡವಾಗುತ್ತದೆ ಎಂದು ತಮ್ಮ ಕಾರಿನಲ್ಲಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸಗೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>