ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಮೇಟಿಕುರ್ಕಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಣೆ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಕುಮಾರ್ (24), ವಿಜಯ್ (28) ಎಂದು ಗುರುತಿಸಲಾಗಿದೆ.
ಮೇಟಿಕುರ್ಕಿ ಬಳಿ ಹೆದ್ದಾರಿ ಬದಿಯಲ್ಲಿ ಶನಿವಾರ ತಡ ರಾತ್ರಿ ಕ್ಯಾಂಟರ್ ನಿಲುಗಡೆ ಮಾಡಿ ಚಾಲಕ ನಿದ್ದೆಗೆ ಜಾರಿದ್ದನು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಅಂಚೆ ಇಲಾಖೆ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಕ್ಯಾಂಟರ್ಗೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.