‘ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರರೂ ಆಯತಪ್ಪಿ ಬಿದ್ದಿದ್ದಾರೆ. ಗಾಬರಿಯಿಂದ ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಇವರಲ್ಲಿ ಒಬ್ಬರು ಪಂಚೆ ಧರಿಸಿದ್ದಾಗಿ ಮಾಹಿತಿ ಸಿಕ್ಕಿದೆ. ಅಪಘಾತಕ್ಕೆ ಕಾರಣವಾದ ದ್ವಿಚಕ್ರ ವಾಹನ ಸಮೀಪದ ಗ್ರಾಮಕ್ಕೆ ಸೇರಿದ ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾಹಿತಿ ನೀಡಿದ್ದಾರೆ.