ಚಿತ್ರದುರ್ಗದ ವಿನಯ್ ಎಂಬುವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಇಲ್ಲಿಯ ಬಸಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಸಕಾಲಕ್ಕೆ ರೆಮ್ಡೆಸಿವಿರ್ ಚುಚ್ಚುಮದ್ದು ಸಿಗದೇ ಸಮಸ್ಯೆಗೆ ಸಿಲುಕಿದ್ದರು. ಈ ಸಂಗತಿಯನ್ನು ವಿನಯ್ ಅವರ ಪತ್ನಿ ಪೂಜಾ ಟ್ವೀಟ್ ಮಾಡಿದ್ದರು. ಇದನ್ನು ಕ್ರಿಕೆಟ್ ಆಟಗಾರ ಹರಭಜನ್ ಸಿಂಗ್ ಹಂಚಿಕೊಂಡಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸೋನು ಸೂದ್, ‘ಚುಚ್ಚುಮದ್ದು ತಲುಪಲಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.