<p><strong>ಚಳ್ಳಕೆರೆ:</strong> ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚಲನಚಿತ್ರ ನಟಿ ರಾಗಿಣಿ ಅವರು ಏಪ್ರಿಲ್ 22ರಂದು ನಗರದ ವಿವಿಧ ವಾರ್ಡ್ಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಎಂ. ರವೀಶ್ಕುಮಾರ್ ತಿಳಿಸಿದರು.</p>.<p>ನಗರದಲ್ಲಿ ಬಿಜೆಪಿ-ಜೆಡಿಎಸ್ ಸಮನ್ವ ಸಭೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಂಬ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಟ್ಟಾಗಿ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇವೆ. ಗೋವಿಂದ ಕಾರಜೋಳ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕಾರ್ಯಕರ್ತರು ಸಂಕಲ್ಪ ಮಾಡಿದ್ದಾರೆ’ ಎಂದು ಹೇಳಿದರು.</p>.<p>‘ಚಳ್ಳಕೆರೆ ವಿಧಾನಸಭಾ ಕೇತ್ರದಲ್ಲಿ ಮೂರು ಬಾರಿ ಪ್ರಚಾರ ನಡೆಸಲಾಗಿದೆ. ಎಲ್ಲೆಡೆ ಮೋದಿ ಅಲೆ ಇದೆ. ಹಾಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಬಿಜೆಪಿ ಮಂಡಲದ ತಾಲ್ಲೂಕು ಘಟಕದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸ್ಥಳೀಯ ಕಾಂಗ್ರೆಸ್ ಶಾಸಕರು ಇದುವರೆಗೆ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ’ ಎಂದು ಮುಖಂಡ ಕೆ.ಟಿ. ಕುಮಾರಸ್ವಾಮಿ ದೂರಿದರು.</p>.<p>ಮುಖಂಡರಾದ ಸೋಮಶೇಖರ್ ಮಂಡಿಮಠ, ಕಾಲುವೆಹಳ್ಳಿ ಜಯಪಾಲಯ್ಯ, ಪಿ.ತಿಪ್ಪೇಸ್ವಾಮಿ, ಹೆಗ್ಗೆರೆ ಆನಂದಪ್ಪ, ಸಿದ್ದಾಪುರ ಚೆನ್ನಿಗರಾಮಯ್ಯ, ಎ.ಅನಿಲ್ಕುಮಾರ್, ಎಂ.ಎನ್. ಜಯರಾಮ್, ಬಿ.ಎಸ್. ಶಿವಪುತ್ರಪ್ಪ, ಮಂಜುನಾಥ, ಸಿ.ಎಸ್.ಪ್ರಸಾದ್, ನಗರಸಭೆ ಸದಸ್ಯ ಪ್ರಮೋದ್, ಜಯಣ್ಣ, ಪಾಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚಲನಚಿತ್ರ ನಟಿ ರಾಗಿಣಿ ಅವರು ಏಪ್ರಿಲ್ 22ರಂದು ನಗರದ ವಿವಿಧ ವಾರ್ಡ್ಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಎಂ. ರವೀಶ್ಕುಮಾರ್ ತಿಳಿಸಿದರು.</p>.<p>ನಗರದಲ್ಲಿ ಬಿಜೆಪಿ-ಜೆಡಿಎಸ್ ಸಮನ್ವ ಸಭೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಂಬ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಟ್ಟಾಗಿ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇವೆ. ಗೋವಿಂದ ಕಾರಜೋಳ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕಾರ್ಯಕರ್ತರು ಸಂಕಲ್ಪ ಮಾಡಿದ್ದಾರೆ’ ಎಂದು ಹೇಳಿದರು.</p>.<p>‘ಚಳ್ಳಕೆರೆ ವಿಧಾನಸಭಾ ಕೇತ್ರದಲ್ಲಿ ಮೂರು ಬಾರಿ ಪ್ರಚಾರ ನಡೆಸಲಾಗಿದೆ. ಎಲ್ಲೆಡೆ ಮೋದಿ ಅಲೆ ಇದೆ. ಹಾಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಬಿಜೆಪಿ ಮಂಡಲದ ತಾಲ್ಲೂಕು ಘಟಕದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸ್ಥಳೀಯ ಕಾಂಗ್ರೆಸ್ ಶಾಸಕರು ಇದುವರೆಗೆ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ’ ಎಂದು ಮುಖಂಡ ಕೆ.ಟಿ. ಕುಮಾರಸ್ವಾಮಿ ದೂರಿದರು.</p>.<p>ಮುಖಂಡರಾದ ಸೋಮಶೇಖರ್ ಮಂಡಿಮಠ, ಕಾಲುವೆಹಳ್ಳಿ ಜಯಪಾಲಯ್ಯ, ಪಿ.ತಿಪ್ಪೇಸ್ವಾಮಿ, ಹೆಗ್ಗೆರೆ ಆನಂದಪ್ಪ, ಸಿದ್ದಾಪುರ ಚೆನ್ನಿಗರಾಮಯ್ಯ, ಎ.ಅನಿಲ್ಕುಮಾರ್, ಎಂ.ಎನ್. ಜಯರಾಮ್, ಬಿ.ಎಸ್. ಶಿವಪುತ್ರಪ್ಪ, ಮಂಜುನಾಥ, ಸಿ.ಎಸ್.ಪ್ರಸಾದ್, ನಗರಸಭೆ ಸದಸ್ಯ ಪ್ರಮೋದ್, ಜಯಣ್ಣ, ಪಾಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>