‘ಕಾರ್ಮಿಕ ಇಲಾಖೆಯಲ್ಲಿ ಪ್ರತಿಯೊಬ್ಬರು ನೋಂದಣಿ ಮಾಡಿಕೊಳ್ಳಬೇಕು. ಅಸಂಘಟಿತ ವಲಯಕ್ಕೆ ಸರ್ಕಾರ ಪರಿಹಾರ, ನೆರವು ಘೋಷಣೆ ಮಾಡಿದಾಗ ಅನುಕೂಲವಾಗಲಿದೆ. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ, ಕಂದಾಯ ಅಧಿಕಾರಿಗಳಿಂದ ಉದ್ಯೋಗ ಪ್ರಮಾಣ ಪತ್ರ ಪಡೆಯಲು ಅವಕಾಶವಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ತಿಳಿಸಿದರು.