ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಗೆರೆಶ್ರೀಗೆ ‘ಆದಿಕವಿ’ ಪ್ರಶಸ್ತಿ

Last Updated 14 ಫೆಬ್ರುವರಿ 2021, 20:09 IST
ಅಕ್ಷರ ಗಾತ್ರ

ಚಿತ್ರದುರ್ಗ: ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ನೀಡುವ ‘ಆದಿಕವಿ’ ಪ್ರಶಸ್ತಿಗೆ ಈ ಬಾರಿ ತಾಲ್ಲೂಕಿನ ಸಿರಿಗೆರೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಆಯ್ಕೆಯಾಗಿದ್ದಾರೆ. ಹೆಸರಾಂತ ಸಂಸ್ಕೃತ ವಿದ್ವಾಂಸ ಬೆಂಗಳೂರಿನ ಡಾ.ಶಂಕರ ರಾಜಾರಾಮನ್ ಅವರು ‘ವಾಗ್ದೇವಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಎರಡೂ ಪ್ರಶಸ್ತಿಗಳು ತಲಾ ₹ 1 ಲಕ್ಷ ನಗದು, ಕಂಚಿನ ಪ್ರತಿಮೆ ಹಾಗೂ ಸನ್ಮಾನ ಪತ್ರ ಹೊಂದಿವೆ. ಫೆಬ್ರುವರಿ 21ರಂದು ಬೆಳಿಗ್ಗೆ 10.30ಕ್ಕೆ ಸಿರಿಗೆರೆ ತರಳಬಾಳು ಬೃಹನ್ಮಠದ ಗುರುದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪರಿಷದ್‌ನ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT