ತರಬೇತಿ ಶಿಬಿರದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ತಜ್ಞ ಮಹಂತೇಶ್ ಅವರು ಸುಧಾರಿತ ಬೇಸಾಯ ಕ್ರಮಗಳು, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡಿಸುವರು. ತಾಲ್ಲೂಕಿನ ಭೀಮನಬಂಡೆ ಸಮೀಪದ ಪ್ರಗತಿಪರ ರೈತ ಬಿ.ಶಿವಮೂರ್ತಿ ಮಾವಿನ ಬೆಳೆಯಲ್ಲಿನ ಯಶಸ್ಸಿನ ಅನುಭವಗಳನ್ನು ರೈತರೊಂದಿಗೆ ಹಂಚಿಕೊಳ್ಳಲಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನ ಕೆರೆಯಾಗಳಹಳ್ಳಿಯ ಪ್ರಗತಿಪರ ರೈತ ಕೆ.ಎಸ್. ರಾಮಸ್ವಾಮಿ, ಬಾಳೆ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡುವರು.