<p><strong>ಧರ್ಮಪುರ:</strong> ‘ಮಿತಿಮೀರಿದ ಕೀಟನಾಶಕಗಳ ಬಳಕೆಯಿಂದ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಕೀಟ ನಾಶಕಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ’ ಎಂದು ಬಬ್ಬೂರು ಕೃಷಿ ವಿಜ್ಞಾನಿ ಓಂಕಾರಪ್ಪ ಸಲಹೆ ನೀಡಿದರು.</p>.<p>ಸಮೀಪದ ರಂಗೇನಹಳ್ಳಿಯ ಭಗವತೀ ಆಂಜನೇಯ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ನೇಗಿಲಯೋಗಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿ ಇಲಾಖೆಯಿಂದ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಲಘು ಪೋಷಕಾಂಶಗಳು ಮತ್ತು ಕೃಷಿ ಉಪಕರಣಗಳು ದೊರೆಯುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದರು.</p>.<p>’ರೈತರು ತಮ್ಮ ಗ್ರಾಮಗಳಲ್ಲಿ ಒಟ್ಟಾಗಿ ಸಹಕಾರ ಸಂಘಗಳನ್ನು ಸ್ಥಾಪಿಸಿಕೊಂಡು ಕೃಷಿ ಪರಿಕರಗಳನ್ನು ಮಾರಾಟ ಮತ್ತು ಸ್ಥಳೀಯವಾಗಿ ಲಭ್ಯವಿರುವಂತೆ ಮಾಡಬೇಕು’ ಎಂದು ರಾಜ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಮಂಡಳಿ ನಿರ್ದೇಶಕ ಕಂದಿಕೆರೆ ಜಗದೀಶ್ ರೈತರಿಗೆ ಸಲಹೆ ನೀಡಿದರು.</p>.<p>ನಿವೃತ್ತ ಶಿಕ್ಷಕ ಗಡಾರಿ ಕೃಷ್ಣಪ್ಪ, ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ್ ಮಾತನಾಡಿದರು.</p>.<p>ವೇದಿಕೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಎಂ.ವಿ.ಮಂಜುನಾಥ್, ನೂರ್ ಸಮದ್, ಕಿರಣ್ ಕುಮಾರ್, ಪವಿತ್ರಾ, ಗೋಪಾಲ್, ಗ್ರಾಮ ಪಂಚಾಯಿತಿ ಸದಸ್ಯರಾದ ಪೃಥ್ವಿ ಕೂಗಾರ್, ತಿಪ್ಪಮ್ಮ, ವೀರಭದ್ರಪ್ಪ,</p>.<p>ಗಿರೀಶ್, ರಾಮಕೃಷ್ಣ ಹೆಗಡೆ, ರಾಮಣ್ಣ, ರಂಗನಾಥ, ಬಡಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ‘ಮಿತಿಮೀರಿದ ಕೀಟನಾಶಕಗಳ ಬಳಕೆಯಿಂದ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಕೀಟ ನಾಶಕಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ’ ಎಂದು ಬಬ್ಬೂರು ಕೃಷಿ ವಿಜ್ಞಾನಿ ಓಂಕಾರಪ್ಪ ಸಲಹೆ ನೀಡಿದರು.</p>.<p>ಸಮೀಪದ ರಂಗೇನಹಳ್ಳಿಯ ಭಗವತೀ ಆಂಜನೇಯ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ನೇಗಿಲಯೋಗಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೃಷಿ ಇಲಾಖೆಯಿಂದ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಲಘು ಪೋಷಕಾಂಶಗಳು ಮತ್ತು ಕೃಷಿ ಉಪಕರಣಗಳು ದೊರೆಯುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದರು.</p>.<p>’ರೈತರು ತಮ್ಮ ಗ್ರಾಮಗಳಲ್ಲಿ ಒಟ್ಟಾಗಿ ಸಹಕಾರ ಸಂಘಗಳನ್ನು ಸ್ಥಾಪಿಸಿಕೊಂಡು ಕೃಷಿ ಪರಿಕರಗಳನ್ನು ಮಾರಾಟ ಮತ್ತು ಸ್ಥಳೀಯವಾಗಿ ಲಭ್ಯವಿರುವಂತೆ ಮಾಡಬೇಕು’ ಎಂದು ರಾಜ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಮಂಡಳಿ ನಿರ್ದೇಶಕ ಕಂದಿಕೆರೆ ಜಗದೀಶ್ ರೈತರಿಗೆ ಸಲಹೆ ನೀಡಿದರು.</p>.<p>ನಿವೃತ್ತ ಶಿಕ್ಷಕ ಗಡಾರಿ ಕೃಷ್ಣಪ್ಪ, ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ್ ಮಾತನಾಡಿದರು.</p>.<p>ವೇದಿಕೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಎಂ.ವಿ.ಮಂಜುನಾಥ್, ನೂರ್ ಸಮದ್, ಕಿರಣ್ ಕುಮಾರ್, ಪವಿತ್ರಾ, ಗೋಪಾಲ್, ಗ್ರಾಮ ಪಂಚಾಯಿತಿ ಸದಸ್ಯರಾದ ಪೃಥ್ವಿ ಕೂಗಾರ್, ತಿಪ್ಪಮ್ಮ, ವೀರಭದ್ರಪ್ಪ,</p>.<p>ಗಿರೀಶ್, ರಾಮಕೃಷ್ಣ ಹೆಗಡೆ, ರಾಮಣ್ಣ, ರಂಗನಾಥ, ಬಡಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>