<p><strong>ಹಿರಿಯೂರು</strong>: ಅಡಿಕೆಯಲ್ಲಿ ಅಂತರ ಬೆಳೆಯಾಗಿ ಹಣ್ಣು ಮತ್ತು ಸಾಂಬಾರು ಪದಾರ್ಥಗಳನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಲು ನೆರವಾಗುತ್ತದೆ ಎಂದು ಭರಮಸಾಗರದ ಪ್ರಗತಿಪರ ರೈತ ಲೋಕೇಶ್ ಹೇಳಿದರು.</p>.<p>ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಡಿಮೆ ನೀರು ಸಾಕಾಗುವ ಮರ ಆಧಾರಿತ ಕೃಷಿ, ಮಿಶ್ರ ಬೆಳೆ ಪದ್ಧತಿ ಹಾಗೂ ಸಮಗ್ರ ಕೃಷಿ ಪದ್ಧತಿಗಳಿಗೆ ರೈತರು ಆದ್ಯತೆ ನೀಡಿದರೆ ಸುಸ್ಥಿರ ಆದಾಯ ಪಡೆಯಬಹುದು ಎಂದು ಹೇಳಿದರು.</p>.<p>ಅಡಿಕೆ ಸಿಪ್ಪೆ ಕಾಂಪೋಸ್ಟ್ ತಯಾರಿಕೆ ವಿಧಾವನ್ನು ಅವರು ವಿವರಿಸಿದರು. ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ, ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಕಂಪನಿಯ ತಾಂತ್ರಿಕ ಮುಖ್ಯಸ್ಥ ಎಸ್. ಕುಮಾರ್ ಮಾತನಾಡಿದರು.</p>.<p>ಚಳ್ಳಕೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ಡಿ.ಉಮೇಶ್, ಹಿರಿಯೂರು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಎ.ವಿ. ಮಂಜುನಾಥ್ ಹಾಗೂ ಜಿಲ್ಲೆಯ ರೈತರು ಭಾಗವಹಿಸಿದ್ದರು.</p>.<p>ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಸಲು ಅಗತ್ಯವಿರುವ 2 ಕೆ.ಜಿ. ಸೂಕ್ಷ್ಮ ಜೀವಾಣುಗಳ ಮಿಶ್ರಣವನ್ನು ರೈತರಿಗೆ ಉಚಿತವಾಗಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ಅಡಿಕೆಯಲ್ಲಿ ಅಂತರ ಬೆಳೆಯಾಗಿ ಹಣ್ಣು ಮತ್ತು ಸಾಂಬಾರು ಪದಾರ್ಥಗಳನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಲು ನೆರವಾಗುತ್ತದೆ ಎಂದು ಭರಮಸಾಗರದ ಪ್ರಗತಿಪರ ರೈತ ಲೋಕೇಶ್ ಹೇಳಿದರು.</p>.<p>ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಡಿಮೆ ನೀರು ಸಾಕಾಗುವ ಮರ ಆಧಾರಿತ ಕೃಷಿ, ಮಿಶ್ರ ಬೆಳೆ ಪದ್ಧತಿ ಹಾಗೂ ಸಮಗ್ರ ಕೃಷಿ ಪದ್ಧತಿಗಳಿಗೆ ರೈತರು ಆದ್ಯತೆ ನೀಡಿದರೆ ಸುಸ್ಥಿರ ಆದಾಯ ಪಡೆಯಬಹುದು ಎಂದು ಹೇಳಿದರು.</p>.<p>ಅಡಿಕೆ ಸಿಪ್ಪೆ ಕಾಂಪೋಸ್ಟ್ ತಯಾರಿಕೆ ವಿಧಾವನ್ನು ಅವರು ವಿವರಿಸಿದರು. ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ, ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಕಂಪನಿಯ ತಾಂತ್ರಿಕ ಮುಖ್ಯಸ್ಥ ಎಸ್. ಕುಮಾರ್ ಮಾತನಾಡಿದರು.</p>.<p>ಚಳ್ಳಕೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ಡಿ.ಉಮೇಶ್, ಹಿರಿಯೂರು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಎ.ವಿ. ಮಂಜುನಾಥ್ ಹಾಗೂ ಜಿಲ್ಲೆಯ ರೈತರು ಭಾಗವಹಿಸಿದ್ದರು.</p>.<p>ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಸಲು ಅಗತ್ಯವಿರುವ 2 ಕೆ.ಜಿ. ಸೂಕ್ಷ್ಮ ಜೀವಾಣುಗಳ ಮಿಶ್ರಣವನ್ನು ರೈತರಿಗೆ ಉಚಿತವಾಗಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>