<p><strong>ಚಳ್ಳಕೆರೆ:</strong> ಕೃಷಿ ಪರಿಕರ ಹಾಗೂ ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಯಾವುದೇ ರೀತಿ ವಂಚನೆ ಮಾಡಬಾರದು ಎಂದು ಜಿಲ್ಲಾ ಕೃಷಿ ನಿರ್ದೇಶಕ ಪ್ರಭಾಕರ್ ಸಲಹೆ ನೀಡಿದರು.</p>.<p>ನಗರದ ಕೃಷಿ ಇಲಾಖೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೃಷಿ ಪರಿಕರ ಮತ್ತು ರಸಗೊಬ್ಬರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ವರ್ತಕರು, ಮಾರಾಟ ಮಾಡುವ ಕೀಟನಾಶಕ, ರಸಗೊಬ್ಬರ ಹಾಗೂ ಬಿತ್ತನೆ ಬೀಜದ ದರ ಪಟ್ಟಿಯ ನಾಮಫಲಕವನ್ನು ಅಂಗಡಿ ಮುಂದೆ ಪ್ರದರ್ಶಿಸಬೇಕು ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಮಳೆಬೀಳುವ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಪ್ರದೇಶದಲ್ಲಿ ಬಿದ್ದ ಮಳೆನೀರನ್ನು ಸಂರಕ್ಷಣೆ ಮಾಡುವುದು ಸವಾಲಾಗಿದೆ’ ಎಂದು ಜಿಲ್ಲಾ ಕೃಷಿ ಜಾಗೃತ ದಳದ ಸಹಾಯಕ ನಿರ್ದೇಶಕ ಉಲ್ಪನ್ಜೈಬಾ ಹೇಳಿದರು.</p>.<p>ಜಾಗೃತ ದಳದ ನಿರ್ದೇಶಕ ಮಲ್ಲನಗೌಡ, ಕೃಷಿ ಸಹಾಯಕ ನಿರ್ದೇಶಕ ಅಶೋಕಕುಮಾರ್, ಕೃಷಿ ಪರಿಕರ ಮಾರಾಟಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷ ಮಂಜುನಾಥ್, ಕೃಷಿ ತಾಂತ್ರಿಕಾಧಿಕಾರಿ ಮೇಘನಾ, ಗುರುನಂದನಾ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಕೃಷಿ ಪರಿಕರ ಹಾಗೂ ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಯಾವುದೇ ರೀತಿ ವಂಚನೆ ಮಾಡಬಾರದು ಎಂದು ಜಿಲ್ಲಾ ಕೃಷಿ ನಿರ್ದೇಶಕ ಪ್ರಭಾಕರ್ ಸಲಹೆ ನೀಡಿದರು.</p>.<p>ನಗರದ ಕೃಷಿ ಇಲಾಖೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೃಷಿ ಪರಿಕರ ಮತ್ತು ರಸಗೊಬ್ಬರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ವರ್ತಕರು, ಮಾರಾಟ ಮಾಡುವ ಕೀಟನಾಶಕ, ರಸಗೊಬ್ಬರ ಹಾಗೂ ಬಿತ್ತನೆ ಬೀಜದ ದರ ಪಟ್ಟಿಯ ನಾಮಫಲಕವನ್ನು ಅಂಗಡಿ ಮುಂದೆ ಪ್ರದರ್ಶಿಸಬೇಕು ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಮಳೆಬೀಳುವ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಪ್ರದೇಶದಲ್ಲಿ ಬಿದ್ದ ಮಳೆನೀರನ್ನು ಸಂರಕ್ಷಣೆ ಮಾಡುವುದು ಸವಾಲಾಗಿದೆ’ ಎಂದು ಜಿಲ್ಲಾ ಕೃಷಿ ಜಾಗೃತ ದಳದ ಸಹಾಯಕ ನಿರ್ದೇಶಕ ಉಲ್ಪನ್ಜೈಬಾ ಹೇಳಿದರು.</p>.<p>ಜಾಗೃತ ದಳದ ನಿರ್ದೇಶಕ ಮಲ್ಲನಗೌಡ, ಕೃಷಿ ಸಹಾಯಕ ನಿರ್ದೇಶಕ ಅಶೋಕಕುಮಾರ್, ಕೃಷಿ ಪರಿಕರ ಮಾರಾಟಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷ ಮಂಜುನಾಥ್, ಕೃಷಿ ತಾಂತ್ರಿಕಾಧಿಕಾರಿ ಮೇಘನಾ, ಗುರುನಂದನಾ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>