<p><strong>ಚಿತ್ರದುರ್ಗ:</strong> ಪಡಿತರ ವ್ಯವಸ್ಥೆಗೆ ಮೆಕ್ಕೆಜೋಳ ಒಳಪಡದೇ ಇರುವುದರಿಂದ ಖರೀದಿ ಕೇಂದ್ರ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ಇಲ್ಲಿನ ಮುರುಘಾ ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮತ್ತು ಕೈಗಾರಿಕಾ ಮೇಳವನ್ನು ಶನಿವಾರ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>‘ಚಿತ್ರದುರ್ಗ, ಹಾವೇರಿ ಸೇರಿ ರಾಜ್ಯದ ಹಲವು ಭಾಗದಲ್ಲೂ ಮೆಕ್ಕೆಜೋಳ ಹೆಚ್ಚಾಗಿ ಬೆಳೆಯಲಾಗಿದೆ. ಆದರೆ, ಖರೀದಿ ಕೇಂದ್ರದ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಭತ್ತ ಖರೀದಿ ಕೇಂದ್ರ ಡಿಸೆಂಬರ್ ನಲ್ಲಿ ತೆರೆಯಲಾಗುತ್ತದೆ. ರಾಗಿ, ತೊಗರಿ ಖರೀದಿ ಕೇಂದ್ರ ಇನ್ನೂ ಪರಿಶೀಲನೆಯಲ್ಲಿದೆ’ ಎಂದು ಹೇಳಿದರು.</p>.<p>‘ಅತಿವೃಷ್ಟಿಯಿಂದ ಬೆಳೆ ಹಾನಿಗೆ ಉಂಟಾಗಿರುವ ಕೃಷಿ ಜಮೀನುಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಪರಿಹಾರಕ್ಕೆ ಜಿಲ್ಲಾಧಿಕಾರಿ ಖಾತೆಯಲ್ಲಿ ಅಗತ್ಯ ಹಣವಿದೆ. ಅತಿವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ’ ಎಂದು ಹೇಳಿದರು.</p>.<p>‘ಕೊರೊನಾ ಸೋಂಕಿಗೆ ನೀಡುವ ಲಸಿಕೆಯನ್ನು ಸಾರ್ವತ್ರಿಕವಾಗಿ ನೀಡಲಾಗುತ್ತದೆ. ಲಸಿಕೆಯನ್ನು ಎಲ್ಲರಿಗೂ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್’' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಪಡಿತರ ವ್ಯವಸ್ಥೆಗೆ ಮೆಕ್ಕೆಜೋಳ ಒಳಪಡದೇ ಇರುವುದರಿಂದ ಖರೀದಿ ಕೇಂದ್ರ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ಇಲ್ಲಿನ ಮುರುಘಾ ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮತ್ತು ಕೈಗಾರಿಕಾ ಮೇಳವನ್ನು ಶನಿವಾರ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>‘ಚಿತ್ರದುರ್ಗ, ಹಾವೇರಿ ಸೇರಿ ರಾಜ್ಯದ ಹಲವು ಭಾಗದಲ್ಲೂ ಮೆಕ್ಕೆಜೋಳ ಹೆಚ್ಚಾಗಿ ಬೆಳೆಯಲಾಗಿದೆ. ಆದರೆ, ಖರೀದಿ ಕೇಂದ್ರದ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಭತ್ತ ಖರೀದಿ ಕೇಂದ್ರ ಡಿಸೆಂಬರ್ ನಲ್ಲಿ ತೆರೆಯಲಾಗುತ್ತದೆ. ರಾಗಿ, ತೊಗರಿ ಖರೀದಿ ಕೇಂದ್ರ ಇನ್ನೂ ಪರಿಶೀಲನೆಯಲ್ಲಿದೆ’ ಎಂದು ಹೇಳಿದರು.</p>.<p>‘ಅತಿವೃಷ್ಟಿಯಿಂದ ಬೆಳೆ ಹಾನಿಗೆ ಉಂಟಾಗಿರುವ ಕೃಷಿ ಜಮೀನುಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಪರಿಹಾರಕ್ಕೆ ಜಿಲ್ಲಾಧಿಕಾರಿ ಖಾತೆಯಲ್ಲಿ ಅಗತ್ಯ ಹಣವಿದೆ. ಅತಿವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ’ ಎಂದು ಹೇಳಿದರು.</p>.<p>‘ಕೊರೊನಾ ಸೋಂಕಿಗೆ ನೀಡುವ ಲಸಿಕೆಯನ್ನು ಸಾರ್ವತ್ರಿಕವಾಗಿ ನೀಡಲಾಗುತ್ತದೆ. ಲಸಿಕೆಯನ್ನು ಎಲ್ಲರಿಗೂ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್’' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>