<p><strong>ಚಿತ್ರದುರ್ಗ:</strong> ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 23 ವರ್ಷಗಳಿಂದಲೂ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಬಂಡತನ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದರು.</p>.<p>ಬಿಸಿಯೂಟ ತಯಾರಕರು ಕನಿಷ್ಟ ವೇತನ, ಜೀವನ ಭದ್ರೆತೆಯಿಲ್ಲದೆ ದುಡಿಯುತ್ತಿದ್ದಾರೆ. ಸಂಜೆ ನಾಲ್ಕು ಗಂಟೆವರೆಗೆ ಕೆಲಸ ಮಾಡಿ ತಿಂಗಳಿಗೆ ₹ 500 ವೇತನ ಹೆಚ್ಚಾಗಿ ನೀಡುತ್ತವೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ ಶಿಕ್ಷಕರಿಗೆ ₹ 20 ಸಾವಿರ ನೀಡುತ್ತಿರುವ ಸರ್ಕಾರ ಅವರ ಜತೆಗೇ ಹೋಗುವ ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ಭತ್ಯೆ ನೀಡುತ್ತಿಲ್ಲ ಎಂದು ದೂರಿದರು.</p>.<p>ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಹಾಜರಾತಿ ಹೆಚ್ಚಿರುವ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಇಬ್ಬರು ಇಲ್ಲವೇ ಮೂವರಿದ್ದಾರೆ. ಕೆಲವು ಶಾಲೆಗಳಲ್ಲಿ ಬಿಸಿಯೂಟ ತಯಾರಕರನ್ನು ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ ಬಾಬು, ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಆರ್. ಉಮಾಪತಿ, ಮುಖಂಡ ವಿಜಯ ಕುಮಾರ್, ಮುಖಂಡರಾದ ಕೆ.ಈ. ಸತ್ಯಕೀರ್ತಿ, ಫರ್ವಿನ್ ಬಾನು, ಕಾಂತಮ್ಮ, ರಜೀಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 23 ವರ್ಷಗಳಿಂದಲೂ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಬಂಡತನ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದರು.</p>.<p>ಬಿಸಿಯೂಟ ತಯಾರಕರು ಕನಿಷ್ಟ ವೇತನ, ಜೀವನ ಭದ್ರೆತೆಯಿಲ್ಲದೆ ದುಡಿಯುತ್ತಿದ್ದಾರೆ. ಸಂಜೆ ನಾಲ್ಕು ಗಂಟೆವರೆಗೆ ಕೆಲಸ ಮಾಡಿ ತಿಂಗಳಿಗೆ ₹ 500 ವೇತನ ಹೆಚ್ಚಾಗಿ ನೀಡುತ್ತವೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ ಶಿಕ್ಷಕರಿಗೆ ₹ 20 ಸಾವಿರ ನೀಡುತ್ತಿರುವ ಸರ್ಕಾರ ಅವರ ಜತೆಗೇ ಹೋಗುವ ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ಭತ್ಯೆ ನೀಡುತ್ತಿಲ್ಲ ಎಂದು ದೂರಿದರು.</p>.<p>ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಹಾಜರಾತಿ ಹೆಚ್ಚಿರುವ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಇಬ್ಬರು ಇಲ್ಲವೇ ಮೂವರಿದ್ದಾರೆ. ಕೆಲವು ಶಾಲೆಗಳಲ್ಲಿ ಬಿಸಿಯೂಟ ತಯಾರಕರನ್ನು ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ ಬಾಬು, ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಆರ್. ಉಮಾಪತಿ, ಮುಖಂಡ ವಿಜಯ ಕುಮಾರ್, ಮುಖಂಡರಾದ ಕೆ.ಈ. ಸತ್ಯಕೀರ್ತಿ, ಫರ್ವಿನ್ ಬಾನು, ಕಾಂತಮ್ಮ, ರಜೀಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>