<p><strong>ಮೊಳಕಾಲ್ಮುರು:</strong> ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದುಆಗ್ರಹಿಸಿ ಸೋಮವಾರ ತಾಲ್ಲೂಕು ಅಂಗನವಾಡಿ ಫೆಡರೇಷನ್ನಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಐಸಿಡಿಸಿ ಯೋಜನೆ ಅಡಿಯಲ್ಲಿ ಈ ಕಾರ್ಯವನ್ನು ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು. ಈ ಕುರಿತು ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳನ್ನು ಸರಬರಾಜು ಮಾಡಬೇಕು. ಮಕ್ಕಳಿಗೆ ಸಮವಸ್ತ್ರ ನೀಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಪಡೆಯುವಾಗಅಂಗನವಾಡಿ ಕೇಂದ್ರದ ವರ್ಗಾವಣೆ ಪತ್ರವನ್ನು ಕಡ್ಡಾಯ ಮಾಡಬೇಕು ಎಂದು<br />ಆಗ್ರಹಿಸಿದರು.</p>.<p>ಈ ಕುರಿತು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>ತಹಶೀಲ್ದಾರ್ ಮಲ್ಲಿಕಾರ್ಜುನ್ ಮನವಿ ಸ್ವೀಕರಿಸಿದರು.</p>.<p>ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ಅರವಿಂದಾ ಬಾಯಿ, ಗಂಗಮ್ಮ, ನಾಗರತ್ನಮ್ಮ, ಭಾಗ್ಯಮ್ಮ, ಮಹಾದೇವಿ, ರಾಜೇಶ್ವರಿ, ಸುಶೀಲಮ್ಮ, ಪಾಲಮ್ಮಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದುಆಗ್ರಹಿಸಿ ಸೋಮವಾರ ತಾಲ್ಲೂಕು ಅಂಗನವಾಡಿ ಫೆಡರೇಷನ್ನಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಐಸಿಡಿಸಿ ಯೋಜನೆ ಅಡಿಯಲ್ಲಿ ಈ ಕಾರ್ಯವನ್ನು ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು. ಈ ಕುರಿತು ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳನ್ನು ಸರಬರಾಜು ಮಾಡಬೇಕು. ಮಕ್ಕಳಿಗೆ ಸಮವಸ್ತ್ರ ನೀಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಪಡೆಯುವಾಗಅಂಗನವಾಡಿ ಕೇಂದ್ರದ ವರ್ಗಾವಣೆ ಪತ್ರವನ್ನು ಕಡ್ಡಾಯ ಮಾಡಬೇಕು ಎಂದು<br />ಆಗ್ರಹಿಸಿದರು.</p>.<p>ಈ ಕುರಿತು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>ತಹಶೀಲ್ದಾರ್ ಮಲ್ಲಿಕಾರ್ಜುನ್ ಮನವಿ ಸ್ವೀಕರಿಸಿದರು.</p>.<p>ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ಅರವಿಂದಾ ಬಾಯಿ, ಗಂಗಮ್ಮ, ನಾಗರತ್ನಮ್ಮ, ಭಾಗ್ಯಮ್ಮ, ಮಹಾದೇವಿ, ರಾಜೇಶ್ವರಿ, ಸುಶೀಲಮ್ಮ, ಪಾಲಮ್ಮಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>