<p>ಮೊಳಕಾಲ್ಮುರು:ಶಿಕ್ಷಣ ದೇಶದ ಅಭಿವೃದ್ಧಿ ಸಂಕೇತವಾಗಿದ್ದು, ಎಲ್ಲರೂ ಶಿಕ್ಷಣದ ಮುಖ್ಯವಾಹಿನಿಗೆ ಬಂದು ದೇಶವನ್ನು ಉತ್ತಮ ದಾರಿಯಲ್ಲಿ ಮುನ್ನೆಡೆಸಬೇಕು ಎಂದು ಜಿಲ್ಲಾವಯಸ್ಕರ ಶಿಕ್ಷಣಾಧಿಕಾರಿ ಮಂಜುಳಾ ಹೇಳಿದರು.</p>.<p>ತಾಲ್ಲೂಕಿನ ಕೋನಸಾಗರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸಾಕ್ಷರ ಭಾರತ್ ಮಿಷನ್ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಕಡ್ಡಾಯ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರವು ಹತ್ತಾರು ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳನ್ನು ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಾಲಯ್ಯ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಣ ಇಲಾಖೆಯ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಉಪ ವ್ಯವಸ್ಥಾಪಕ ಸಂಪತ್ ಕುಮಾರ್, ಸಾಕ್ಷರ ಭಾರತ್ ತಾಲ್ಲೂಕು ನೋಡಲ್ ಅಧಿಕಾರಿ ಕೆ. ಶಾಂತವೀರಣ್ಣ, ಸಿಆರ್ಪಿ ಹಮೀದ್ಸಾಬಿ, ಪಿಡಿಒ ಬಾಂಡ್ರಾವಪ್ಪ, ಮುಖ್ಯಶಿಕ್ಷಕ ಕರಿಬಸಪ್ಪ, ಶಿಕ್ಷಕಿ ಜಯಲಕ್ಷ್ಮೀ, ಜನಸಂಸ್ಥಾನ ಸಂಸ್ಥೆಯ ವಿರೂಪಾಕ್ಷಪ್ಪ, ವೆಡ್ಸ್ ಸಂಸ್ಥೆಯ ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು:ಶಿಕ್ಷಣ ದೇಶದ ಅಭಿವೃದ್ಧಿ ಸಂಕೇತವಾಗಿದ್ದು, ಎಲ್ಲರೂ ಶಿಕ್ಷಣದ ಮುಖ್ಯವಾಹಿನಿಗೆ ಬಂದು ದೇಶವನ್ನು ಉತ್ತಮ ದಾರಿಯಲ್ಲಿ ಮುನ್ನೆಡೆಸಬೇಕು ಎಂದು ಜಿಲ್ಲಾವಯಸ್ಕರ ಶಿಕ್ಷಣಾಧಿಕಾರಿ ಮಂಜುಳಾ ಹೇಳಿದರು.</p>.<p>ತಾಲ್ಲೂಕಿನ ಕೋನಸಾಗರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸಾಕ್ಷರ ಭಾರತ್ ಮಿಷನ್ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಕಡ್ಡಾಯ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರವು ಹತ್ತಾರು ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳನ್ನು ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಾಲಯ್ಯ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಣ ಇಲಾಖೆಯ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಉಪ ವ್ಯವಸ್ಥಾಪಕ ಸಂಪತ್ ಕುಮಾರ್, ಸಾಕ್ಷರ ಭಾರತ್ ತಾಲ್ಲೂಕು ನೋಡಲ್ ಅಧಿಕಾರಿ ಕೆ. ಶಾಂತವೀರಣ್ಣ, ಸಿಆರ್ಪಿ ಹಮೀದ್ಸಾಬಿ, ಪಿಡಿಒ ಬಾಂಡ್ರಾವಪ್ಪ, ಮುಖ್ಯಶಿಕ್ಷಕ ಕರಿಬಸಪ್ಪ, ಶಿಕ್ಷಕಿ ಜಯಲಕ್ಷ್ಮೀ, ಜನಸಂಸ್ಥಾನ ಸಂಸ್ಥೆಯ ವಿರೂಪಾಕ್ಷಪ್ಪ, ವೆಡ್ಸ್ ಸಂಸ್ಥೆಯ ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>