‘ಮಹಾರಾಷ್ಟ್ರದಲ್ಲಿ ಬಂಜಾರ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಿದೆ. ಔರಾದ್ ಮೀಸಲು ಕ್ಷೇತ್ರವಾದ ಬಳಿಕ ಚವ್ಹಾಣ್ ಕರ್ನಾಟಕಕ್ಕೆ ಬಂದಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದು ಅಪ್ರಜಾತಾಂತ್ರಿಕ ನಡೆಯಾಗಿದ್ದು, ತನಿಖೆಯಾಗುವ ಅಗತ್ಯವಿದೆ. ಕೂಡಲೇ ಇವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಕರ್ನಾಟಕದ ಲಂಬಾಣಿ ಸಮುದಾಯದವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.