ಬ್ರಹ್ಮರಥೋತ್ಸವ ನಿಮಿತ್ತ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ತೇರನ್ನು ನಾನಾ ಹೂವು, ಫಲ, ಬಾಳೆಕಂದುಗಳಿಂದ ಹಾಗೂ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ರಾಜ್ಯದ ನಾನಾ ಕಡೆಯಿಂದ ಆಗಮಿಸಿದ್ದ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥ ಮುಂದಕ್ಕೆ ಸಾಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು ತೂರುವ ಮೂಲಕ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.