<p><strong>ಹೊಸದುರ್ಗ:</strong> ತಾಲ್ಲೂಕಿನ ಮಧುರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಂಜನೇಯಸ್ವಾಮಿ ದೇವಾಲಯದ ಆರಂಭೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>2019ಕ್ಕೆ ದೇವಾಲಯದ ನಿರ್ಮಾಣಕ್ಕೆ ಪೂಜೆ ಮಾಡಲಾಗಿತ್ತು. 2024ಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ₹ 2.5 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಂಡಿದ್ದು, ಶಿಲ್ಪಿ ವಿನಯ್ ಕುಮಾರ್ ಕೆತ್ತನೆ ಕಾರ್ಯ ಮಾಡಿದ್ದಾರೆ.</p>.<p>ಕಾರ್ಯಕ್ರಮದ ಅಂಗವಾಗಿ ಮಹಾಗಣಪತಿ ಪೂಜೆ, ಪುಣ್ಯಾಹವಾಚನ, ಮಹಾಸಂಕಲ್ಪ, ಜಲಾಧಿವಾಸ, ಗೋಪೂಜೆ, ಚಪ್ಪರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ನೂತನ ದೇವಾಲಯಕ್ಕೆ ಕಳಶಾರೋಹಣ ನೇರವೇರಿಸಿದರು.</p>.<p>ಮಧುರೆ ಮಾರುತಿ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿಯ ಸದಸ್ಯರು, ಚನ್ನಗಿರಿ, ತರೀಕೆರೆ, ಹೊಳಲ್ಕೆರೆ, ಚಿಕ್ಕಮಗಳೂರಿನ ನೂರಾರು ಭಕ್ತರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಹಾಗೂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ತಾಲ್ಲೂಕಿನ ಮಧುರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಂಜನೇಯಸ್ವಾಮಿ ದೇವಾಲಯದ ಆರಂಭೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>2019ಕ್ಕೆ ದೇವಾಲಯದ ನಿರ್ಮಾಣಕ್ಕೆ ಪೂಜೆ ಮಾಡಲಾಗಿತ್ತು. 2024ಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ₹ 2.5 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಂಡಿದ್ದು, ಶಿಲ್ಪಿ ವಿನಯ್ ಕುಮಾರ್ ಕೆತ್ತನೆ ಕಾರ್ಯ ಮಾಡಿದ್ದಾರೆ.</p>.<p>ಕಾರ್ಯಕ್ರಮದ ಅಂಗವಾಗಿ ಮಹಾಗಣಪತಿ ಪೂಜೆ, ಪುಣ್ಯಾಹವಾಚನ, ಮಹಾಸಂಕಲ್ಪ, ಜಲಾಧಿವಾಸ, ಗೋಪೂಜೆ, ಚಪ್ಪರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ನೂತನ ದೇವಾಲಯಕ್ಕೆ ಕಳಶಾರೋಹಣ ನೇರವೇರಿಸಿದರು.</p>.<p>ಮಧುರೆ ಮಾರುತಿ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿಯ ಸದಸ್ಯರು, ಚನ್ನಗಿರಿ, ತರೀಕೆರೆ, ಹೊಳಲ್ಕೆರೆ, ಚಿಕ್ಕಮಗಳೂರಿನ ನೂರಾರು ಭಕ್ತರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಹಾಗೂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>