ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿ.ಕೆ.ಶಿವಕುಮಾರ್ ತಿರುಗೇಟು

Last Updated 2 ಫೆಬ್ರುವರಿ 2021, 7:34 IST
ಅಕ್ಷರ ಗಾತ್ರ


ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ. ಕೊರೊನಾ ಸೋಂಕಿನ ಆಂತಕದಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಪುತ್ರಿಯ ವಿವಾಹದ ಆಮಂತ್ರಣ ಪತ್ರಿಕೆ ವಿತರಿಸಲು ಚಿತ್ರದುರ್ಗದ ವಿವಿಧ ಮಠಗಳಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 'ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್' ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ. ಹಾಸಿಗೆ, ದಿಂಬು, ಔಷಧಿಯಲ್ಲಿ ಭ್ರಷ್ಟಾಚಾರ ಮಾಡಿದವರು ಬಿಜೆಪಿಯವರು ಎಂದು ಕಿಡಿಕಾರಿದರು.

ಬಿಜೆಪಿ ದೇಶಕ್ಕೆ ಕೆಟ್ಟ ಬಜೆಟ್ ನೀಡಿದೆ. ಯಾವ ವರ್ಗದವರಿಗೂ ಬಜೆಟ್ ಬಗ್ಗೆ ಸಮಾಧಾನ, ಉತ್ಸಾಹವೇ ಇಲ್ಲ. ರೈತರು, ಕಾರ್ಮಿಕರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲಾ ವರ್ಗಕ್ಕೆ ತೊಂದರೆ ಆಗಿದೆ ಎಂದು ಟೀಕಿಸಿದರು.

ಡೀಸೆಲ್, ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದೆ. ಜನ ರೊಚ್ಚಿಗೆ ಎದ್ದಿದ್ದಾರೆ. ಏಕೆ ಸುಮ್ಮನೆ ಕುಳಿತಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಬೆಲೆ ಏರಿಕೆ ವಿರುದ್ದ ನಾವು ಹೋರಾಟ ಮಾಡುತ್ತೇವೆ. ರೈತರ ಪರ ನಿಲ್ಲುವ ಕಾರ್ಯಕ್ರಮಗಳನ್ನು ನಾಳೆ ಘೋಷಣೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT