‘ಗೋ ಹತ್ಯೆ ಮಾಡಿದಲ್ಲಿ ₹50 ಸಾವಿರದಿಂದ ₹5 ಲಕ್ಷದವರೆಗೂ ದಂಡ ವಿಧಿಸಬಹುದು ಎಂಬುದಾಗಿ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ. ಕೃಷಿ ಚಟುವಟಿಕೆಯಲ್ಲಿ ಬಳಸಿದರೆ ಯಾವ ಅಭ್ಯಂತರವಿಲ್ಲ. ದೈಹಿಕವಾಗಿ ಹಿಂಸಿಸಿದರೆ, ಅಪರಾಧವಾಗಲಿದೆ’ ಎಂದು ತಿಳಿಸಿದರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ವಿಚಾರ ಸಂಕಿರಣ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ವಕೀಲರ ಸಂಘ ಅಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಂ. ಅನಿಲ್ಕುಮಾರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಕೃಷ್ಣಪ್ಪ, ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ಇದ್ದರು.