<p><strong>ಚಿತ್ರದುರ್ಗ</strong>: ಇಲ್ಲಿಯ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ‘ಚುನಾವಣೆ’ ಪ್ರಕ್ರಿಯೆಯಲ್ಲಿ ಎನ್.ಒ. ಅನುರಾಧಾ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪವಿಭಾಗಾಧಿಕಾರಿ ಚಂದ್ರಯ್ಯ ಅವರು ಆಯ್ಕೆಯನ್ನು ಘೋಷಿಸಿದರು.</p>.<p>ಸದಸ್ಯೆ ಶ್ವೇತಾ ವೀರೇಶ್ ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಂತೆ ಚುನಾವಣೆ ನಡೆಯಿತು. ಸದಸ್ಯೆ ಅನುರಾಧಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಅವರ ಅವಧಿ ಮುಂದಿನ ಒಂದು ವರ್ಷದವರೆಗೆ ಎಂದು ಮೂಲಗಳು ತಿಳಿಸಿವೆ.<br />ಇಲ್ಲಿಯ ನಗರಸಭೆಗೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಸಂಬಂಧ ಚುನಾಯಿತ 35 ಮಂದಿ ಸದಸ್ಯರು, ಶಾಸಕರು ಹಾಗೂ ಸಂಸದರು ಸೇರಿ ಒಟ್ಟು 37 ಜನ ಮತದಾನದ ಹಕ್ಕನ್ನು ಹೊಂದಿದ್ದಾರೆ. ಇದರಲ್ಲಿ 18 ಜನ ಮಾತ್ರ ಹಾಜರಾಗಿದ್ದರು. ಉಳಿದ 19 ಜನ ಗೈರಾಗಿದ್ದರು.</p>.<p>ನೂತನ ಉಪಾಧ್ಯಕ್ಷೆ ಅನುರಾಧಾ, ‘ನಗರದ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯ ಕುರಿತು ಹೆಚ್ಚು ಆದ್ಯತೆ ನೀಡಲಾಗುವುದು. ನಿತ್ಯ ವಾರ್ಡ್ಗಳಲ್ಲಿ ಸಂಚರಿಸಿ ಸಾರ್ವಜನಿಕರು, ಮತದಾರರ ಸಮಸ್ಯೆ ಆಲಿಸುತ್ತೇನೆ. ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪೌರಾಯುಕ್ತ ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಮ್ಮ, ಸಿಬ್ಬಂದಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಇಲ್ಲಿಯ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ‘ಚುನಾವಣೆ’ ಪ್ರಕ್ರಿಯೆಯಲ್ಲಿ ಎನ್.ಒ. ಅನುರಾಧಾ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪವಿಭಾಗಾಧಿಕಾರಿ ಚಂದ್ರಯ್ಯ ಅವರು ಆಯ್ಕೆಯನ್ನು ಘೋಷಿಸಿದರು.</p>.<p>ಸದಸ್ಯೆ ಶ್ವೇತಾ ವೀರೇಶ್ ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಂತೆ ಚುನಾವಣೆ ನಡೆಯಿತು. ಸದಸ್ಯೆ ಅನುರಾಧಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಅವರ ಅವಧಿ ಮುಂದಿನ ಒಂದು ವರ್ಷದವರೆಗೆ ಎಂದು ಮೂಲಗಳು ತಿಳಿಸಿವೆ.<br />ಇಲ್ಲಿಯ ನಗರಸಭೆಗೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಸಂಬಂಧ ಚುನಾಯಿತ 35 ಮಂದಿ ಸದಸ್ಯರು, ಶಾಸಕರು ಹಾಗೂ ಸಂಸದರು ಸೇರಿ ಒಟ್ಟು 37 ಜನ ಮತದಾನದ ಹಕ್ಕನ್ನು ಹೊಂದಿದ್ದಾರೆ. ಇದರಲ್ಲಿ 18 ಜನ ಮಾತ್ರ ಹಾಜರಾಗಿದ್ದರು. ಉಳಿದ 19 ಜನ ಗೈರಾಗಿದ್ದರು.</p>.<p>ನೂತನ ಉಪಾಧ್ಯಕ್ಷೆ ಅನುರಾಧಾ, ‘ನಗರದ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯ ಕುರಿತು ಹೆಚ್ಚು ಆದ್ಯತೆ ನೀಡಲಾಗುವುದು. ನಿತ್ಯ ವಾರ್ಡ್ಗಳಲ್ಲಿ ಸಂಚರಿಸಿ ಸಾರ್ವಜನಿಕರು, ಮತದಾರರ ಸಮಸ್ಯೆ ಆಲಿಸುತ್ತೇನೆ. ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪೌರಾಯುಕ್ತ ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಮ್ಮ, ಸಿಬ್ಬಂದಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>