ನೂತನ ಉಪಾಧ್ಯಕ್ಷೆ ಅನುರಾಧಾ, ‘ನಗರದ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯ ಕುರಿತು ಹೆಚ್ಚು ಆದ್ಯತೆ ನೀಡಲಾಗುವುದು. ನಿತ್ಯ ವಾರ್ಡ್ಗಳಲ್ಲಿ ಸಂಚರಿಸಿ ಸಾರ್ವಜನಿಕರು, ಮತದಾರರ ಸಮಸ್ಯೆ ಆಲಿಸುತ್ತೇನೆ. ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.