<p><strong>ಹಿರಿಯೂರು</strong>: ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ 2021ರ ಜ. 1ರಿಂದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಶುಕ್ರವಾರ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗೆ ಮನವಿ ಸಲ್ಲಿಸಿದರು.</p>.<p>‘ನ. 29ರ ವೇಳೆಗೆ ಜಲಾಶಯದ ನೀರಿನಮಟ್ಟ 102 ಅಡಿ ಮುಟ್ಟಲಿದ್ದು, ಅಚ್ಚುಕಟ್ಟು ಪ್ರದೇಶದ ತೆಂಗು, ಅಡಿಕೆ, ಬಾಳೆ, ಶೇಂಗಾ, ರಾಗಿ, ತರಕಾರಿ ಬೆಳೆಗಳ ಉಳಿವಿಗೆ ವರ್ಷದಲ್ಲಿ ಆರು ಬಾರಿ ನೀರು ಹರಿಸಬೇಕಿದೆ. ಹೀಗಾಗಿ, ಮೊದಲ ನೀರನ್ನು ಜ. 1ರಿಂದ ಹರಿಸಬೇಕು. ಈ ಬಗ್ಗೆ ಕೃಷಿ, ತೋಟಗಾರಿಕೆ ಅಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳ ಜತೆ ಚರ್ಚಿಸಿ ನೀರು ಬಿಡುವ ಕುರಿತು ಕ್ಯಾಲೆಂಡರ್ ಬಿಡುಗಡೆ ಮಾಡಬೇಕು’ ಎಂದು ರೈತ ಮುಖಂಡರು ಒತ್ತಾಯಿದರು.</p>.<p>ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಸಿ.ಸಿದ್ದರಾಮಣ್ಣ, ಕಸವನಹಳ್ಳಿ ರಮೇಶ್, ವಿರೂಪಾಕ್ಷಪ್ಪ, ರಾಮಚಂದ್ರು, ಸಿದ್ದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ 2021ರ ಜ. 1ರಿಂದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಶುಕ್ರವಾರ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗೆ ಮನವಿ ಸಲ್ಲಿಸಿದರು.</p>.<p>‘ನ. 29ರ ವೇಳೆಗೆ ಜಲಾಶಯದ ನೀರಿನಮಟ್ಟ 102 ಅಡಿ ಮುಟ್ಟಲಿದ್ದು, ಅಚ್ಚುಕಟ್ಟು ಪ್ರದೇಶದ ತೆಂಗು, ಅಡಿಕೆ, ಬಾಳೆ, ಶೇಂಗಾ, ರಾಗಿ, ತರಕಾರಿ ಬೆಳೆಗಳ ಉಳಿವಿಗೆ ವರ್ಷದಲ್ಲಿ ಆರು ಬಾರಿ ನೀರು ಹರಿಸಬೇಕಿದೆ. ಹೀಗಾಗಿ, ಮೊದಲ ನೀರನ್ನು ಜ. 1ರಿಂದ ಹರಿಸಬೇಕು. ಈ ಬಗ್ಗೆ ಕೃಷಿ, ತೋಟಗಾರಿಕೆ ಅಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳ ಜತೆ ಚರ್ಚಿಸಿ ನೀರು ಬಿಡುವ ಕುರಿತು ಕ್ಯಾಲೆಂಡರ್ ಬಿಡುಗಡೆ ಮಾಡಬೇಕು’ ಎಂದು ರೈತ ಮುಖಂಡರು ಒತ್ತಾಯಿದರು.</p>.<p>ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಸಿ.ಸಿದ್ದರಾಮಣ್ಣ, ಕಸವನಹಳ್ಳಿ ರಮೇಶ್, ವಿರೂಪಾಕ್ಷಪ್ಪ, ರಾಮಚಂದ್ರು, ಸಿದ್ದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>