<p><strong>ಸಿರಿಗೆರೆ</strong>: ಸಮೀಪದ ವಿಜಾಪುರ ಗ್ರಾಮದ ಮರುಳಸಿದ್ದಪ್ಪ ಎಂಬುವರ ತೋಟದಲ್ಲಿ ಈಚೆಗೆ 33ರಿಂದ 40 ಕ್ವಿಂಟಲ್ ಹಸಿ ಅಡಿಕೆಯನ್ನು ರಾತ್ರೋರಾತ್ರಿ ಕದ್ದು ಒಯ್ದಿದ್ದ ನಾಲ್ವರನ್ನು ಭರಮಸಾಗರ ಪೊಲೀಸರು ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ.</p>.<p>ಭರಮಸಾಗರ ಸಮೀಪದ ಗೊಲ್ಲರಹಟ್ಟಿಯ ಮೋಹನ್ ಕುಮಾರ್, ಭರಮಸಾಗರದ ಉಮೇಶ್ ಕೊಳ್ಳಿ, ಚೌಲಿಹಳ್ಳಿ ಗ್ರಾಮದ ಕರಿಬಸಪ್ಪ ಮತ್ತು ಹೆಗ್ಗೆರೆ ಗ್ರಾಮದ ಅಂಜಿನಪ್ಪ ಬಂಧಿತರು.</p>.<p>‘ಇವರು ಬಳಸುತ್ತಿದ್ದ ಮೊಬೈಲ್ ಫೋನ್ನ ಸಂಕೇತಗಳನ್ನು ಆಧರಿಸಿ ಬಂಧಿಸಲಾಗಿದೆ. ಆರೋಪಿಗಳು ಕಳೆದೆರಡು ತಿಂಗಳಿಂದ ಭರಮಸಾಗರ, ಹೆಗ್ಗೆರೆ, ಕೊಳಹಾಳ್, ಅರಬಘಟ್ಟ, ಯಳಗೋಡು, ಬಸವನಶಿವನಕೆರೆ ಸೇರಿ ಸುತ್ತಮುತ್ತಲಿನ ಗ್ರಾಮಗಳ ಅಡಿಕೆ ತೋಟಗಳಲ್ಲಿ 15ರಿಂದ 20 ಕಡೆ ಅಡಿಕೆ ಕಳವು ಮಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರ ಈ ಕ್ರಮಕ್ಕೆ ಸುತ್ತಲಿನ ಅಡಿಕೆ ಕೃಷಿಕರು ಅಭಿನಂದನೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಸಮೀಪದ ವಿಜಾಪುರ ಗ್ರಾಮದ ಮರುಳಸಿದ್ದಪ್ಪ ಎಂಬುವರ ತೋಟದಲ್ಲಿ ಈಚೆಗೆ 33ರಿಂದ 40 ಕ್ವಿಂಟಲ್ ಹಸಿ ಅಡಿಕೆಯನ್ನು ರಾತ್ರೋರಾತ್ರಿ ಕದ್ದು ಒಯ್ದಿದ್ದ ನಾಲ್ವರನ್ನು ಭರಮಸಾಗರ ಪೊಲೀಸರು ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ.</p>.<p>ಭರಮಸಾಗರ ಸಮೀಪದ ಗೊಲ್ಲರಹಟ್ಟಿಯ ಮೋಹನ್ ಕುಮಾರ್, ಭರಮಸಾಗರದ ಉಮೇಶ್ ಕೊಳ್ಳಿ, ಚೌಲಿಹಳ್ಳಿ ಗ್ರಾಮದ ಕರಿಬಸಪ್ಪ ಮತ್ತು ಹೆಗ್ಗೆರೆ ಗ್ರಾಮದ ಅಂಜಿನಪ್ಪ ಬಂಧಿತರು.</p>.<p>‘ಇವರು ಬಳಸುತ್ತಿದ್ದ ಮೊಬೈಲ್ ಫೋನ್ನ ಸಂಕೇತಗಳನ್ನು ಆಧರಿಸಿ ಬಂಧಿಸಲಾಗಿದೆ. ಆರೋಪಿಗಳು ಕಳೆದೆರಡು ತಿಂಗಳಿಂದ ಭರಮಸಾಗರ, ಹೆಗ್ಗೆರೆ, ಕೊಳಹಾಳ್, ಅರಬಘಟ್ಟ, ಯಳಗೋಡು, ಬಸವನಶಿವನಕೆರೆ ಸೇರಿ ಸುತ್ತಮುತ್ತಲಿನ ಗ್ರಾಮಗಳ ಅಡಿಕೆ ತೋಟಗಳಲ್ಲಿ 15ರಿಂದ 20 ಕಡೆ ಅಡಿಕೆ ಕಳವು ಮಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರ ಈ ಕ್ರಮಕ್ಕೆ ಸುತ್ತಲಿನ ಅಡಿಕೆ ಕೃಷಿಕರು ಅಭಿನಂದನೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>