ಕೊರೊನಾ ಸೋಂಕು ನಿಯಂತ್ರಣಕ್ಕೆ ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದು ಶ್ರಮಿಸಿದ್ದಾರೆ. ಆದರೆ, ಸರ್ಕಾರ ಕೆಲಸಕ್ಕೆ ಸರಿಯಾದ ವೇತನ ಪಾವತಿ ಮಾಡುತ್ತಿಲ್ಲ. ಜುಲೈ 10ರಿಂದ 29ರವರೆಗೆ ಸೇವೆಯಿಂದ ಹೊರಗೆ ಉಳಿದು ಮುಷ್ಕರ ನಡೆಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಪಡೆದಿದ್ದ ಗಡುವಿನ ಅವಧಿ ಮುಗಿದಿದ್ದು ಹೋರಾಟ ಮುಂದುವರಿಸುವುದು ಅನಿವಾರ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.