ಪ್ರೀತಿಯ ವಿಷಯಕ್ಕೆ ಮನನೊಂದು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಯ 21 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದಳು. ಅದನ್ನು ಕಂಡ ಗಸ್ತಿನಲ್ಲಿದ್ದ ಪೊಲೀಸರು ತಕ್ಷಣ ಕ್ರಿಮಿನಾಶಕ ಬಾಟಲಿಯನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿ ಠಾಣೆಗೆ ಕರೆದುಕೊಂಡು ಹೋದರು.