ಹಬ್ಬದ ಅಂಗವಾಗಿ ಗುರುವಾರ ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪಸ್ವಾಮಿಯ ನೂರಾರು ಮಾಲಾಧಾರಿಗಳು ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲು ಏರಿದರು. ಐನೂರಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳು ಪಡಿ ಹತ್ತಿದರು. ಆಂಧ್ರಪ್ರದೇಶ, ಮಹಾರಾಷ್ಟ್ರ, ಗೋವಾ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದಲೂ ಭಕ್ತರು ಆಗಮಿಸಿದ್ದರು. ಪಡಿ ಏರಲು ಜ.19 ರವರೆಗೆ ಅವಕಾಶವಿದೆ.