‘ವಿಷ್ಣುವರ್ಧನ್, ಪುಟ್ಟಣ್ಣ ಕಣಗಾಲ್, ಸಿದ್ಧಲಿಂಗಯ್ಯ, ರಾಜೇಂದ್ರ ಸಿಂಗ್ ಬಾಬು ಸೇರಿ ಹಲವರ ಜತೆ ಕೆಲಸ ಮಾಡುವ ಅವಕಾಶ ಒದಗಿಬಂದಿತು. 66 ಸಿನಿಮಾಕ್ಕೆ ಸಂಭಾಷಣೆ ಬರೆದಿದ್ದೇನೆ. ಬೆಂಗಳೂರಿಗೆ ಬಂದು ನೆಲೆಸುವಂತೆ ವಿಷ್ಣುವರ್ಧನ್ ಸಾಕಷ್ಟು ಬಾರಿ ಹೇಳಿದ್ದರು. ಆದರೆ, ಚಿತ್ರದುರ್ಗ ಬಿಟ್ಟು ಹೋಗಲಿಲ್ಲ. ಅಲ್ಲಿಗೆ ಹೋಗಿದ್ದರೆ ಕಮರ್ಷಿಯಲ್ ಕಥೆಗಾರ ಆಗುತ್ತಿದ್ದೆ’ ಎಂದು ಹಾಸ್ಯ ಚಟಾಕಿ ಹಾರಿಸಿದರು.