ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮತ್ತು ವಿದ್ಯುತ್ ಉತ್ಪಾದನೆಗಾಗಿ ರೂಪಿಸಿರುವ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಕಾಂಗ್ರೆಸ್ ನಾಯಕರು ಅಡ್ಡಿಪಡಿಸುತ್ತಿದ್ದಾರೆ. ಕೈ ನಾಯಕ ನಡುವೆಯೇ ಹಲವು ಗೊಂದಲಗಳಿದ್ದು, ಪಕ್ಷದ ನಾಯಕತ್ವಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಜತೆಗೆ ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಹೆಚ್ಚಿದೆ. ಆದಕಾರಣ ನಾ ಮುಂದು ತಾ ಮುಂದು ಎನ್ನುವಂತೆ ಲವಲವಿಕೆಯಿಂದ ಪಾದಯಾತ್ರೆ
ಹಮ್ಮಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿ ದ್ದಾಗ ಮೇಕೆದಾಟು ಯೋಜನೆಯನ್ನುಏಕೆ ಅನುಷ್ಠಾನ
ಗೊಳಿಸಲಿಲ್ಲ’ ಎಂದು ಪ್ರಶ್ನಿಸಿದರು.