ಚಿತ್ರದುರ್ಗ: ‘ದೇಶದಲ್ಲಿ ರಾಹುಲ್ ಗಾಂಧಿಗಿಂತ ಪೆದ್ದ ಬೇರೆ ಯಾರೂ ಇಲ್ಲ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.
‘ಶ್ರೀರಾಮುಲು ಪೆದ್ದ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಗುರುವಾರ ಇಲ್ಲಿ ತಿರುಗೇಟು ನೀಡಿದರು.
‘ದೇಶದಲ್ಲಿ ಕಾಂಗ್ರೆಸ್ ಛೀ, ಥೂ ಅನ್ನಿಸಿಕೊಂಡು ಅಧಿಕಾರ ನಡೆಸಿದೆ. ಹಿಂದುಳಿದ ಸಮುದಾಯ ಬಳಸಿಕೊಂಡು ರಾಜಕೀಯ ಮಾಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಮೀಸಲಾತಿ ಹೆಚ್ಚಿಸುವ ಅವಕಾಶವಿತ್ತು. ಆದರೆ, ಅವರಿಗೆ ಇಚ್ಛಾಶಕ್ತಿ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.