‘ನೆಹರೂ ಬಗ್ಗೆ ವಾಜಪೇಯಿ ಅವರಿಗೆ ಅಪಾರ ಗೌರವವಿತ್ತು. ಮೊರಾರ್ಜಿ ದೇಸಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ವಾಜಪೇಯಿ, ನೆಹರೂ ಅವರ ಪ್ರತಿಮೆ ಪುನರ್ ಸ್ಥಾಪನೆ ಆಗುವಂತೆ ನೋಡಿಕೊಂಡರು. ಈ ಇಬ್ಬರೂ ನಾಯಕರ ಬಗ್ಗೆ ಆಡುತ್ತಿರುವ ಮಾತುಗಳು ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ. ಯಾರನ್ನು ಬೇಕಾದರೂ ಟೀಕೆ ಮಾಡಬಹುದು ಎಂಬುದು ಸರಿಯಲ್ಲ’ ಎಂದರು.