<p><strong>ಭರಮಸಾಗರ</strong>: ಇಲ್ಲಿನ ಗ್ರಾಮ ದೇವತೆ ದುರ್ಗಾಂಬಿಕ ದೇವಿ ದೇವಸ್ಥಾನದ ಗೂಳಿ ಬಸವ ಶನಿವಾರ ರಾತ್ರಿ ಚರ್ಮಗಂಟು ರೋಗಕ್ಕೆ ಬಲಿಯಾಗಿದೆ.</p>.<p>ದೇವರ ಗೂಳಿ ಗಂಟು ರೋಗಕ್ಕೆ ತುತ್ತಾಗಿ ಅನಾರೋಗ್ಯದಿಂದ ಬಳಲುತ್ತಿರುವುದನ್ನು ಗಮನಿಸಿದ ಗ್ರಾಮದ ಯುವಕರು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಗೂಳಿಯನ್ನು ಉಳಿಸಿಕೊಳ್ಳಲು ನಡೆಸಿದ ಯತ್ನ ಫಲಕಾರಿಯಾಗಲಿಲ್ಲ.</p>.<p>17 ವರ್ಷಗಳ ಹಿಂದೆ ಗ್ರಾಮದ ಎಳೆನೀರು ರಾಜು ಎಂಬುವರು ಈ ಗೂಳಿಯನ್ನು ಗ್ರಾಮ ದೇವತೆ ದೇವಸ್ಥಾನಕ್ಕೆ ದಾನವಾಗಿ ನೀಡಿದ್ದರು. ಯಾರಿಗೂ ತೊಂದರೆ ನೀಡದೆ ಜನರು ನೀಡಿದ್ದನ್ನು ತಿನ್ನುತ್ತ ಗ್ರಾಮದ ಬೀದಿಗಳಲ್ಲಿ ರಾಜಗಾಂಭೀರ್ಯದಿಂದ ನಡೆಯುತ್ತಿದ್ದ ಬಸವ ಗ್ರಾಮಸ್ಥರ ಪ್ರೀತಿ, ವಿಶ್ವಾಸಕ್ಕೆ ಪಾತ್ರವಾಗಿತ್ತು. ಈಗ ಬಸವನ ಸಾವು ಗ್ರಾಮಸ್ಥರಲ್ಲಿ ದುಃಖ ಉಂಟು ಮಾಡಿದೆ.</p>.<p>ಭಾನುವಾರ ಬೆಳಿಗ್ಗೆ ಸಾಂಪ್ರದಾಯಿಕ ವಿಧಿ ವಿಧಾನಗಳಂತೆ ಗೂಳಿ ಬಸವನಿಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ವಿ.ಶರಣಪ್ಪ, ಕೆಪಿಸಿಸಿ ಸದಸ್ಯ ಎಚ್.ಎನ್.ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಕೋಗುಂಡೆ ಕರಿಬಸಪ್ಪ, ವಿವಿಧ ಮುಖಂಡರು ಅಂತಿಮ ನಮನ ಸಲ್ಲಿಸಿದರು.</p>.<p>ನಂತರ ಮಂಗಳವಾದ್ಯದೊಂದಿಗೆ ಗೂಳಿಬಸವನ ಮೃತ ದೇಹವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ದು ದುರ್ಗಾಂಬಿಕಾ ದೇವಸ್ಥಾನದ ಸಮೀಪದಲ್ಲಿ ಸಮಾದಿ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭರಮಸಾಗರ</strong>: ಇಲ್ಲಿನ ಗ್ರಾಮ ದೇವತೆ ದುರ್ಗಾಂಬಿಕ ದೇವಿ ದೇವಸ್ಥಾನದ ಗೂಳಿ ಬಸವ ಶನಿವಾರ ರಾತ್ರಿ ಚರ್ಮಗಂಟು ರೋಗಕ್ಕೆ ಬಲಿಯಾಗಿದೆ.</p>.<p>ದೇವರ ಗೂಳಿ ಗಂಟು ರೋಗಕ್ಕೆ ತುತ್ತಾಗಿ ಅನಾರೋಗ್ಯದಿಂದ ಬಳಲುತ್ತಿರುವುದನ್ನು ಗಮನಿಸಿದ ಗ್ರಾಮದ ಯುವಕರು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಗೂಳಿಯನ್ನು ಉಳಿಸಿಕೊಳ್ಳಲು ನಡೆಸಿದ ಯತ್ನ ಫಲಕಾರಿಯಾಗಲಿಲ್ಲ.</p>.<p>17 ವರ್ಷಗಳ ಹಿಂದೆ ಗ್ರಾಮದ ಎಳೆನೀರು ರಾಜು ಎಂಬುವರು ಈ ಗೂಳಿಯನ್ನು ಗ್ರಾಮ ದೇವತೆ ದೇವಸ್ಥಾನಕ್ಕೆ ದಾನವಾಗಿ ನೀಡಿದ್ದರು. ಯಾರಿಗೂ ತೊಂದರೆ ನೀಡದೆ ಜನರು ನೀಡಿದ್ದನ್ನು ತಿನ್ನುತ್ತ ಗ್ರಾಮದ ಬೀದಿಗಳಲ್ಲಿ ರಾಜಗಾಂಭೀರ್ಯದಿಂದ ನಡೆಯುತ್ತಿದ್ದ ಬಸವ ಗ್ರಾಮಸ್ಥರ ಪ್ರೀತಿ, ವಿಶ್ವಾಸಕ್ಕೆ ಪಾತ್ರವಾಗಿತ್ತು. ಈಗ ಬಸವನ ಸಾವು ಗ್ರಾಮಸ್ಥರಲ್ಲಿ ದುಃಖ ಉಂಟು ಮಾಡಿದೆ.</p>.<p>ಭಾನುವಾರ ಬೆಳಿಗ್ಗೆ ಸಾಂಪ್ರದಾಯಿಕ ವಿಧಿ ವಿಧಾನಗಳಂತೆ ಗೂಳಿ ಬಸವನಿಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ವಿ.ಶರಣಪ್ಪ, ಕೆಪಿಸಿಸಿ ಸದಸ್ಯ ಎಚ್.ಎನ್.ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಕೋಗುಂಡೆ ಕರಿಬಸಪ್ಪ, ವಿವಿಧ ಮುಖಂಡರು ಅಂತಿಮ ನಮನ ಸಲ್ಲಿಸಿದರು.</p>.<p>ನಂತರ ಮಂಗಳವಾದ್ಯದೊಂದಿಗೆ ಗೂಳಿಬಸವನ ಮೃತ ದೇಹವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ದು ದುರ್ಗಾಂಬಿಕಾ ದೇವಸ್ಥಾನದ ಸಮೀಪದಲ್ಲಿ ಸಮಾದಿ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>