<p><strong>ಚಿತ್ರದುರ್ಗ:</strong> ಪಂಚಮಸಾಲಿ ಸಮುದಾಯದ ಹೋರಾಟವನ್ನು ದಮನಿಸಲು ಸಣ್ಣ ಸಮುದಾಯಗಳನ್ನು ಎತ್ತಿಕಟ್ಟುವ ಹುನ್ನಾರವನ್ನು ಕೆಲ ರಾಜಕಾರಣಿಗಳು ಮಾಡಿದರು. ಆದರೆ, ಅದು ಫಲನೀಡಲಿಲ್ಲ. ಅಂತಹ ಸಣ್ಣ ಸಮುದಾಯಗಳೇ ಹೋರಾಟವನ್ನು ಬೆಂಬಲಿಸುತ್ತಿವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ಶುಕ್ರವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನಸಂಖ್ಯೆಯಲ್ಲಿ ಪ್ರಬಲರಾದರೂ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದೇವೆ. ಇದೇ ಆಧಾರದ ಮೇರೆಗೆ ಮೀಸಲಾತಿ ಸೌಲಭ್ಯ ಕೇಳುತ್ತಿದ್ದೇವೆ. ಇದನ್ನು ತಪ್ಪಾಗಿ ಅರ್ಥೈಸಿದ ಕೆಲವರು ಕೆಲ ಜಾತಿಗಳನ್ನು ಎತ್ತಿಕೊಟ್ಟುವ ಕೆಲಸ ಮಾಡಿದರು’ ಎಂದು ಹೇಳಿದರು.</p>.<p>‘ಉಪಚುನಾವಣೆ ಎದುರಾಗಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಚುನಾವಣಾ ರಾಜಕಾರಣಕ್ಕೂ ಮೀಸಲಾತಿ ಹೋರಾಟಕ್ಕೂ ಸಂಬಂಧವಿಲ್ಲ. ರಾಜಕಾರಣ ಹಾಗೂ ಹೋರಾಟಕ್ಕೆ ಸಂಬಂಧ ಕಲ್ಪಿಸುವ ಪ್ರಯತ್ನ ಸಲ್ಲದು. ಪಕ್ಷ ನಿಷ್ಠೆ ಹಾಗೂ ರಾಜಕಾರಣ ವ್ಯಕ್ತಿಗತವಾದದು’ ಎಂದು ವಿವರಣೆ ನೀಡಿದರು.</p>.<p>‘ರಾಜ್ಯ ಸರ್ಕಾರ ಆಶ್ವಾಸನೆ ನೀಡಿದ್ದರಿಂದ ಧರಣಿಯನ್ನು ಹಿಂಪಡೆಯಲಾಗಿದೆ. ಸರ್ಕಾರಕ್ಕೆ ನೀಡಿದ ಆರು ತಿಂಗಳ ಗಡುವು ಸೆ.15ಕ್ಕೆ ಕೊನೆಯಾಗಲಿದೆ. ಸರ್ಕಾರ ಪೂರಕವಾಗಿ ಸ್ಪಂದಿಸದೇ ಇದ್ದರೆ ಅ.15ರಿಂದ ಧರಣಿ ಆರಂಭಿಸುತ್ತೇವೆ. ಜನರನ್ನು ಹೋರಾಟಕ್ಕೆ ಸಜ್ಜುಗೊಳಿಸುವ ಹಾಗೂ ಸಂಘಟಿಸುವ ಕಾರ್ಯವನ್ನು ಮುಂದುವರಿಸುತ್ತೇವೆ’ ಎಂದರು.</p>.<p>‘ಕೂಡಲಸಂಗಮದಿಂದ ಬೆಂಗಳೂರಿನವರೆಗೆ ನಡೆಸಿದ ಪಾದಯಾತ್ರೆಗೆ ಮೊದಲ ಹಂತದ ಯಶಸ್ಸು ಸಿಕ್ಕಿದೆ. ವಿಧಾನಮಂಡಲದ ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆ ನಡೆದಿದೆ. ಲಿಂಗಾಯತ ಸಮುದಾಯದ ಇತರ ಒಳಪಂಡಗಳ ಬೆಂಬಲ ಸಿಕ್ಕಿದೆ. ಸಮುದಾಯದ ಜನರು ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ನಮೂದಿಸಬೇಕು’ ಎಂಬ ಸೂಚನೆ ನೀಡಿದರು.</p>.<p class="Subhead"><strong>ಏ.11ಕ್ಕೆ ಕೂಡಲಸಂಗಮ</strong></p>.<p>‘ಶರಣಾರ್ಥಿ ಸಂದೇಶ ಜಾಥಾ’ ಮಾರ್ಚ್ 23ರಂದು ಬೆಂಗಳೂರಿನಿಂದ ಹೊರಟು ಚಿತ್ರದುರ್ಗ ಪ್ರವೇಶಿಸಿದೆ. ಏ.11ರಂದು ಕೂಡಲಸಂಗಮ ತಲುಪಲಿದೆ.</p>.<p>‘ಮೀಸಲಾತಿ ಆದೇಶ ಪ್ರತಿ ಹಿಡಿದೇ ಹಿಂದಿರುಗಬೇಕು ಎಂಬ ಸಂಕಲ್ಪ ಮಾಡಿದ್ದೆವು. ಕಾನೂನಾತ್ಮಕ ತೊಡಕು ಎದುರಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಮೀಸಲಾತಿ ಸೌಲಭ್ಯ ಪಡೆಯುವ ವಿಶ್ವಾಸವಿದೆ. ಶನಿವಾರ ದಾವಣಗೆರೆ ಜಿಲ್ಲೆಯಲ್ಲಿ ಜಾಥಾ ಸಾಗಲಿದೆ’ ಎಂದು ಸ್ವಾಮೀಜಿ ಹೇಳಿದರು.</p>.<p>‘ಮುರುಗೇಶ ನಿರಾಣಿ ಅವರು ಸರ್ಕಾರದ ಪ್ರತಿನಿಧಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೋರಾಟದ ಮೂಲಕ ಸಮುದಾಯದಲ್ಲಿ ಒಗ್ಗಟ್ಟು ಮೂಡಿದೆ. ಸಮುದಾಯದ ಮುಖಂಡರು ಹಾಗೂ ಪೀಠಾಧ್ಯಕ್ಷರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಎಂ.ತಿಪ್ಪೇಸ್ವಾಮಿ, ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ಮುಖಂಡರಾದ ಜಿತೇಂದ್ರ ಎನ್. ಹುಲಿಕುಂಟೆ, ಮಂಜುನಾಥ್, ಪರಮೇಶ್, ಯೋಗೇಶ್ ಇದ್ದರು.</p>.<p>* ಮೀಸಲಾತಿ ನೀಡುವ ಬಗ್ಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಕಾಲಮಿತಿಯ ಒಳಗೆ ಸೌಲಭ್ಯ ಕಲ್ಪಿಸುವ ಭರವಸೆ ಸಿಕ್ಕಿದೆ. ಸರ್ಕಾರ ಮಾತಿಗೆ ತಪ್ಪಿದರೆ ಹೋರಾಟ ಮುಂದುವರಿಯಲಿದೆ.</p>.<p><em><strong>–ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠ, ಕೂಡಲಸಂಗಮ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಪಂಚಮಸಾಲಿ ಸಮುದಾಯದ ಹೋರಾಟವನ್ನು ದಮನಿಸಲು ಸಣ್ಣ ಸಮುದಾಯಗಳನ್ನು ಎತ್ತಿಕಟ್ಟುವ ಹುನ್ನಾರವನ್ನು ಕೆಲ ರಾಜಕಾರಣಿಗಳು ಮಾಡಿದರು. ಆದರೆ, ಅದು ಫಲನೀಡಲಿಲ್ಲ. ಅಂತಹ ಸಣ್ಣ ಸಮುದಾಯಗಳೇ ಹೋರಾಟವನ್ನು ಬೆಂಬಲಿಸುತ್ತಿವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p>.<p>ಶುಕ್ರವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನಸಂಖ್ಯೆಯಲ್ಲಿ ಪ್ರಬಲರಾದರೂ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದೇವೆ. ಇದೇ ಆಧಾರದ ಮೇರೆಗೆ ಮೀಸಲಾತಿ ಸೌಲಭ್ಯ ಕೇಳುತ್ತಿದ್ದೇವೆ. ಇದನ್ನು ತಪ್ಪಾಗಿ ಅರ್ಥೈಸಿದ ಕೆಲವರು ಕೆಲ ಜಾತಿಗಳನ್ನು ಎತ್ತಿಕೊಟ್ಟುವ ಕೆಲಸ ಮಾಡಿದರು’ ಎಂದು ಹೇಳಿದರು.</p>.<p>‘ಉಪಚುನಾವಣೆ ಎದುರಾಗಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಚುನಾವಣಾ ರಾಜಕಾರಣಕ್ಕೂ ಮೀಸಲಾತಿ ಹೋರಾಟಕ್ಕೂ ಸಂಬಂಧವಿಲ್ಲ. ರಾಜಕಾರಣ ಹಾಗೂ ಹೋರಾಟಕ್ಕೆ ಸಂಬಂಧ ಕಲ್ಪಿಸುವ ಪ್ರಯತ್ನ ಸಲ್ಲದು. ಪಕ್ಷ ನಿಷ್ಠೆ ಹಾಗೂ ರಾಜಕಾರಣ ವ್ಯಕ್ತಿಗತವಾದದು’ ಎಂದು ವಿವರಣೆ ನೀಡಿದರು.</p>.<p>‘ರಾಜ್ಯ ಸರ್ಕಾರ ಆಶ್ವಾಸನೆ ನೀಡಿದ್ದರಿಂದ ಧರಣಿಯನ್ನು ಹಿಂಪಡೆಯಲಾಗಿದೆ. ಸರ್ಕಾರಕ್ಕೆ ನೀಡಿದ ಆರು ತಿಂಗಳ ಗಡುವು ಸೆ.15ಕ್ಕೆ ಕೊನೆಯಾಗಲಿದೆ. ಸರ್ಕಾರ ಪೂರಕವಾಗಿ ಸ್ಪಂದಿಸದೇ ಇದ್ದರೆ ಅ.15ರಿಂದ ಧರಣಿ ಆರಂಭಿಸುತ್ತೇವೆ. ಜನರನ್ನು ಹೋರಾಟಕ್ಕೆ ಸಜ್ಜುಗೊಳಿಸುವ ಹಾಗೂ ಸಂಘಟಿಸುವ ಕಾರ್ಯವನ್ನು ಮುಂದುವರಿಸುತ್ತೇವೆ’ ಎಂದರು.</p>.<p>‘ಕೂಡಲಸಂಗಮದಿಂದ ಬೆಂಗಳೂರಿನವರೆಗೆ ನಡೆಸಿದ ಪಾದಯಾತ್ರೆಗೆ ಮೊದಲ ಹಂತದ ಯಶಸ್ಸು ಸಿಕ್ಕಿದೆ. ವಿಧಾನಮಂಡಲದ ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆ ನಡೆದಿದೆ. ಲಿಂಗಾಯತ ಸಮುದಾಯದ ಇತರ ಒಳಪಂಡಗಳ ಬೆಂಬಲ ಸಿಕ್ಕಿದೆ. ಸಮುದಾಯದ ಜನರು ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ನಮೂದಿಸಬೇಕು’ ಎಂಬ ಸೂಚನೆ ನೀಡಿದರು.</p>.<p class="Subhead"><strong>ಏ.11ಕ್ಕೆ ಕೂಡಲಸಂಗಮ</strong></p>.<p>‘ಶರಣಾರ್ಥಿ ಸಂದೇಶ ಜಾಥಾ’ ಮಾರ್ಚ್ 23ರಂದು ಬೆಂಗಳೂರಿನಿಂದ ಹೊರಟು ಚಿತ್ರದುರ್ಗ ಪ್ರವೇಶಿಸಿದೆ. ಏ.11ರಂದು ಕೂಡಲಸಂಗಮ ತಲುಪಲಿದೆ.</p>.<p>‘ಮೀಸಲಾತಿ ಆದೇಶ ಪ್ರತಿ ಹಿಡಿದೇ ಹಿಂದಿರುಗಬೇಕು ಎಂಬ ಸಂಕಲ್ಪ ಮಾಡಿದ್ದೆವು. ಕಾನೂನಾತ್ಮಕ ತೊಡಕು ಎದುರಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಮೀಸಲಾತಿ ಸೌಲಭ್ಯ ಪಡೆಯುವ ವಿಶ್ವಾಸವಿದೆ. ಶನಿವಾರ ದಾವಣಗೆರೆ ಜಿಲ್ಲೆಯಲ್ಲಿ ಜಾಥಾ ಸಾಗಲಿದೆ’ ಎಂದು ಸ್ವಾಮೀಜಿ ಹೇಳಿದರು.</p>.<p>‘ಮುರುಗೇಶ ನಿರಾಣಿ ಅವರು ಸರ್ಕಾರದ ಪ್ರತಿನಿಧಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೋರಾಟದ ಮೂಲಕ ಸಮುದಾಯದಲ್ಲಿ ಒಗ್ಗಟ್ಟು ಮೂಡಿದೆ. ಸಮುದಾಯದ ಮುಖಂಡರು ಹಾಗೂ ಪೀಠಾಧ್ಯಕ್ಷರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಎಂ.ತಿಪ್ಪೇಸ್ವಾಮಿ, ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ಮುಖಂಡರಾದ ಜಿತೇಂದ್ರ ಎನ್. ಹುಲಿಕುಂಟೆ, ಮಂಜುನಾಥ್, ಪರಮೇಶ್, ಯೋಗೇಶ್ ಇದ್ದರು.</p>.<p>* ಮೀಸಲಾತಿ ನೀಡುವ ಬಗ್ಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಕಾಲಮಿತಿಯ ಒಳಗೆ ಸೌಲಭ್ಯ ಕಲ್ಪಿಸುವ ಭರವಸೆ ಸಿಕ್ಕಿದೆ. ಸರ್ಕಾರ ಮಾತಿಗೆ ತಪ್ಪಿದರೆ ಹೋರಾಟ ಮುಂದುವರಿಯಲಿದೆ.</p>.<p><em><strong>–ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠ, ಕೂಡಲಸಂಗಮ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>