<p><strong>ಚಿತ್ರದುರ್ಗ</strong>: ‘ವಧು- ವರರು ಬಸವಾದಿ ಪ್ರಮಥರ ಆಶಯದಂತೆ ಸತ್ಯಶುದ್ಧವಾಗಿ ಸರಳ ಜೀವನ ಮಾಡಬೇಕು. ಕಾಯಕ ನಿರ್ವಹಿಸುತ್ತ ನೆಮ್ಮದಿ ಕಾಣಬೇಕು’ ಎಂದು ಶ್ರೀ ಮಠದ ಬಸವ ಮುರುಘೇಂದ್ರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಭಾನುವಾರ ಆಯೋಜಿಸಿದ್ದ 31ನೇ ವರ್ಷದ 10ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದ ಅವರು, ‘ಮದುವೆ ಎಂಬುದು ಕೇವಲ ವ್ಯವಹಾರಿಕವಲ್ಲ. ಎರಡು ಸಂಬಂಧಗಳನ್ನು ಒಟ್ಟುಗೂಡಿಸುವುದು’ ಎಂದರು.</p>.<p>‘ಬಸವಣ್ಣನವರು ಹೇಳುವಂತೆ ಸತಿ- ಪತಿ ಒಂದಾಗಿ ನಡೆಯಬೇಕು. ಗಂಡ- ಹೆಂಡತಿಯರು ಜ್ಞಾನದ ಜ್ಯೋತಿಯಾಗಿ ಬೆಳಗಬೇಕು. ಅದಕ್ಕೆ ಪ್ರೀತಿಯೆಂಬ ತೈಲವನ್ನು ಹಾಕಿದರೆ ಮಾತ್ರ ಬೆಳಕು ಚೆಲ್ಲುತ್ತದೆ’ ಎಂದು ತಿಳಿಸಿದರು.</p>.<p>‘ಇದು ದುಬಾರಿ ಕಾಲ. ಬಡವರು ಮದುವೆ ಮಾಡುವುದು ಕಷ್ಟವಾಗಿದೆ. ಹಾಗಾಗಿ ಇಂಥವರಿಗೆ ಶ್ರೀಮಠವು ಸಾಮೂಹಿಕ ಕಲ್ಯಾಣದ ಮೂಲಕ ಸಹಕಾರಿಯಾಗಿದೆ’ ಎಂದರು.</p>.<p>‘ವಧು– ವರರು ತಂದೆ- ತಾಯಿಗಳನ್ನು ಕುಲದೈವ ಎಂದು ಭಾವಿಸಬೇಕು. ಮರ್ಯಾದೆ, ಮಾತಿಗೆ ಅಂಜಿ ಕೆಲವರು ಸಾಲ ಮಾಡಿ ಮದುವೆ ಮಾಡಿ ಸಾಲದ ಕೂಪಕ್ಕೆ ಸಿಲುಕುತ್ತಾರೆ. ಸರಳವಾಗಿ ಬದುಕು, ಸಹಜ ವರ್ತನೆ ನಿಮ್ಮೆಲ್ಲರದಾಗಿರಲಿ’ ಎಂದು ತಿಳಿಸಿದರು.</p>.<p>‘ಮದುವೆ ಅಂದರೆ ಗಲಾಟೆ, ಗದ್ದಲ, ಆಡಂಬರ, ದುಂದುವೆಚ್ಚ, ವೈಭವದ ಭೋಜನಾದಿಗಳನ್ನು ಮಾಡುವುದನ್ನು ನಾವು ಕಾಣುತ್ತೇವೆ. ಆದರೆ ಮುರುಘಾಮಠದಲ್ಲಿ ನಡೆಯುವ ಸಾಮೂಹಿಕ ಕಲ್ಯಾಣ ಮಹೋತ್ಸವ ಅತ್ಯಂತ ಸರಳವಾಗಿ ನಡೆಯುತ್ತದೆ’ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹೇಳಿದರು.</p>.<p>‘ಜಾತಿ, ವರ್ಣ, ವರ್ಗಭೇದ ರಹಿತವಾಗಿ ಒಂದೇ ವೇದಿಕೆಯಲ್ಲಿ ದಾಂಪತ್ಯಕ್ಕೆ ಕಾಲಿಡುವುದು ಪುಣ್ಯದ ಕಾರ್ಯ. ಬಯಲು ಸೀಮೆ ಜನರಿಗೆ ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ. ಈ ವೇದಿಕೆಯಲ್ಲಿ ಸತಿ– ಪತಿಗಳಾದವರು ಸಾಮಾಜಿಕ ಮೌಲ್ಯದೊಂದಿಗೆ ಜೀವನ ಸಾಗಿಸಲು ಮಾರ್ಗದರ್ಶನ ಪಡೆಯುತ್ತಾರೆ’ ಎಂದರು.</p>.<p>‘ಮುರುಘಾಮಠವು ನಾಡಿನಲ್ಲಿ ತ್ರಿವಿಧ ದಾಸೋಹಕ್ಕೆ ಹೆಸರಾಗಿದೆ. ಮಠದಲ್ಲಿ ಜ್ಞಾನ, ಅನ್ನದಾಸೋಹ ನಿರಂತರವಾಗಿ ಈ ರೀತಿಯ ಕಾರ್ಯಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ’ ಎಂದು ನಿಪ್ಪಾಣಿ ವಿರಕ್ತ ಮಠದ ಬಸವ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.</p>.<p>6 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು. ದಾವಣಗೆರೆಯ ರಂಗಭೂಮಿ ಕಲಾವಿದೆ ಜಿ.ಉಮಾಶ್ರೀ ಅವರನ್ನು ಸನ್ಮಾನಿಸಲಾಯಿತು. ಭಕ್ತರಾದ ಗಿರೀಶಾಚಾರ್, ಪೈಲ್ವಾನ್ ತಿಪ್ಪೇಸ್ವಾಮಿ, ಟಿ.ಪಿ.ಜ್ಞಾನಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ವಧು- ವರರು ಬಸವಾದಿ ಪ್ರಮಥರ ಆಶಯದಂತೆ ಸತ್ಯಶುದ್ಧವಾಗಿ ಸರಳ ಜೀವನ ಮಾಡಬೇಕು. ಕಾಯಕ ನಿರ್ವಹಿಸುತ್ತ ನೆಮ್ಮದಿ ಕಾಣಬೇಕು’ ಎಂದು ಶ್ರೀ ಮಠದ ಬಸವ ಮುರುಘೇಂದ್ರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಭಾನುವಾರ ಆಯೋಜಿಸಿದ್ದ 31ನೇ ವರ್ಷದ 10ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದ ಅವರು, ‘ಮದುವೆ ಎಂಬುದು ಕೇವಲ ವ್ಯವಹಾರಿಕವಲ್ಲ. ಎರಡು ಸಂಬಂಧಗಳನ್ನು ಒಟ್ಟುಗೂಡಿಸುವುದು’ ಎಂದರು.</p>.<p>‘ಬಸವಣ್ಣನವರು ಹೇಳುವಂತೆ ಸತಿ- ಪತಿ ಒಂದಾಗಿ ನಡೆಯಬೇಕು. ಗಂಡ- ಹೆಂಡತಿಯರು ಜ್ಞಾನದ ಜ್ಯೋತಿಯಾಗಿ ಬೆಳಗಬೇಕು. ಅದಕ್ಕೆ ಪ್ರೀತಿಯೆಂಬ ತೈಲವನ್ನು ಹಾಕಿದರೆ ಮಾತ್ರ ಬೆಳಕು ಚೆಲ್ಲುತ್ತದೆ’ ಎಂದು ತಿಳಿಸಿದರು.</p>.<p>‘ಇದು ದುಬಾರಿ ಕಾಲ. ಬಡವರು ಮದುವೆ ಮಾಡುವುದು ಕಷ್ಟವಾಗಿದೆ. ಹಾಗಾಗಿ ಇಂಥವರಿಗೆ ಶ್ರೀಮಠವು ಸಾಮೂಹಿಕ ಕಲ್ಯಾಣದ ಮೂಲಕ ಸಹಕಾರಿಯಾಗಿದೆ’ ಎಂದರು.</p>.<p>‘ವಧು– ವರರು ತಂದೆ- ತಾಯಿಗಳನ್ನು ಕುಲದೈವ ಎಂದು ಭಾವಿಸಬೇಕು. ಮರ್ಯಾದೆ, ಮಾತಿಗೆ ಅಂಜಿ ಕೆಲವರು ಸಾಲ ಮಾಡಿ ಮದುವೆ ಮಾಡಿ ಸಾಲದ ಕೂಪಕ್ಕೆ ಸಿಲುಕುತ್ತಾರೆ. ಸರಳವಾಗಿ ಬದುಕು, ಸಹಜ ವರ್ತನೆ ನಿಮ್ಮೆಲ್ಲರದಾಗಿರಲಿ’ ಎಂದು ತಿಳಿಸಿದರು.</p>.<p>‘ಮದುವೆ ಅಂದರೆ ಗಲಾಟೆ, ಗದ್ದಲ, ಆಡಂಬರ, ದುಂದುವೆಚ್ಚ, ವೈಭವದ ಭೋಜನಾದಿಗಳನ್ನು ಮಾಡುವುದನ್ನು ನಾವು ಕಾಣುತ್ತೇವೆ. ಆದರೆ ಮುರುಘಾಮಠದಲ್ಲಿ ನಡೆಯುವ ಸಾಮೂಹಿಕ ಕಲ್ಯಾಣ ಮಹೋತ್ಸವ ಅತ್ಯಂತ ಸರಳವಾಗಿ ನಡೆಯುತ್ತದೆ’ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹೇಳಿದರು.</p>.<p>‘ಜಾತಿ, ವರ್ಣ, ವರ್ಗಭೇದ ರಹಿತವಾಗಿ ಒಂದೇ ವೇದಿಕೆಯಲ್ಲಿ ದಾಂಪತ್ಯಕ್ಕೆ ಕಾಲಿಡುವುದು ಪುಣ್ಯದ ಕಾರ್ಯ. ಬಯಲು ಸೀಮೆ ಜನರಿಗೆ ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ. ಈ ವೇದಿಕೆಯಲ್ಲಿ ಸತಿ– ಪತಿಗಳಾದವರು ಸಾಮಾಜಿಕ ಮೌಲ್ಯದೊಂದಿಗೆ ಜೀವನ ಸಾಗಿಸಲು ಮಾರ್ಗದರ್ಶನ ಪಡೆಯುತ್ತಾರೆ’ ಎಂದರು.</p>.<p>‘ಮುರುಘಾಮಠವು ನಾಡಿನಲ್ಲಿ ತ್ರಿವಿಧ ದಾಸೋಹಕ್ಕೆ ಹೆಸರಾಗಿದೆ. ಮಠದಲ್ಲಿ ಜ್ಞಾನ, ಅನ್ನದಾಸೋಹ ನಿರಂತರವಾಗಿ ಈ ರೀತಿಯ ಕಾರ್ಯಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ’ ಎಂದು ನಿಪ್ಪಾಣಿ ವಿರಕ್ತ ಮಠದ ಬಸವ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.</p>.<p>6 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು. ದಾವಣಗೆರೆಯ ರಂಗಭೂಮಿ ಕಲಾವಿದೆ ಜಿ.ಉಮಾಶ್ರೀ ಅವರನ್ನು ಸನ್ಮಾನಿಸಲಾಯಿತು. ಭಕ್ತರಾದ ಗಿರೀಶಾಚಾರ್, ಪೈಲ್ವಾನ್ ತಿಪ್ಪೇಸ್ವಾಮಿ, ಟಿ.ಪಿ.ಜ್ಞಾನಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>