<p>ಚಿತ್ರದುರ್ಗ: ‘ಬಸವಣ್ಣ ಅವರ ಚಿಂತನೆ ಫಲವಾಗಿ ಮಹಿಳೆಯರು ಸಾಧನೆಯತ್ತ ಮುಖ ಮಾಡಲು ಸಾಧ್ಯವಾಗಿದೆ. ಶೋಷಿತ ವರ್ಗ ಮುಖ್ಯವಾಹಿನಿಗೆ ಬರಲು ಸಹಕಾರಿ ಆಗಿದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.</p>.<p>ಸೀಬಾರ ಸಮೀಪದ ಕಚೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ತಾಲ್ಲೂಕು ಘಟಕದಿಂದ ಶುಕ್ರವಾರ ಆಯೋಜಿಸಿದ್ದ ‘ಬಸವ ಜಯಂತಿ’ಯಲ್ಲಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಅನುಭವ ಮಂಟಪದ ಪರಿಕಲ್ಪನೆಯಲ್ಲಿಯೇ ಅಂಬೇಡ್ಕರ್ ರಚಿಸಿದ ಸಂವಿಧಾನ ಇರುವುದು ವಿಶೇಷ’ ಎಂದರು.</p>.<p>‘ಅಂಧಶ್ರದ್ಧೆ, ಮೌಢ್ಯಾಚಾರಣೆ, ಅಸಮಾನತೆ ವಿರುದ್ಧ ನಿರಂತರ ಹೋರಾಟ ನಡೆಸಿ, ವೈಜ್ಞಾನಿಕ ಸಮಾಜ ನಿರ್ಮಾಣದ ಕನಸು ಕಂಡಿದ್ದ ಬಸವಣ್ಣನ ಆದರ್ಶಗಳನ್ನು ವಿವಿಧ ಮಠಾಧೀಶರು, ಧರ್ಮಾಧಿಕಾರಿಗಳು, ಪ್ರಜ್ಞಾವಂತರು, ಚಿಂತಕರು ಅನುಷ್ಠಾನಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಸರ್ವರ ಸಹಕಾರ ಅಗತ್ಯ’ ಎಂದು ಮನವಿ ಮಾಡಿದರು.</p>.<p>ವಿಜಯಮ್ಮ ಆಂಜನೇಯ, ಅರುಂಧತಿ ಆಂಜನೇಯ, ಕಾಂಗ್ರೆಸ್ ಪರಿಶಿಷ್ಟ ಜಾತಿ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕೋಟಿ, ಪ್ರದೀಪ್, ರಂಗಸ್ವಾಮಿ, ವಿರುಪಾಕ್ಷಪ್ಪ, ರೇಖಾ ಇದ್ದರು.</p>.<p><span class="quote">ಮಹದೇವ ನಿಧನಕ್ಕೆ ಸಂತಾಪ:</span> ‘ರಾಜಕೀಯ ವಿಶ್ಲೇಷಕ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ ಪತ್ರಿಕಾರಂಗಕ್ಕೆ ಮತ್ತು ನಾಡಿಗೆ ತುಂಬಲಾರದ ನಷ್ಟವಾಗಿದೆ’ ಎಂದು ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<p>‘ಮಹದೇವ ಪ್ರಕಾಶ್ ರಾಜ್ಯದ ರಾಜಕೀಯವನ್ನು ಚೆನ್ನಾಗಿ ಅಧ್ಯಯನ ಮಾಡಿದ್ದರು. ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪ ಅವರ ಕಾಲದಿಂದ ಈವರೆಗಿನ ಮುಖ್ಯಮಂತ್ರಿಗಳ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳ ಸಾಧನೆ ಹಾಗೂ ನಡೆದ ಘಟನೆಗಳ ಕುರಿತು ಅಂಕಿ-ಅಂಶಗಳ ಸಮೇತ ಬರೆಯುತ್ತಿದ್ದರು. ಪತ್ರಿಕಾ ಕ್ಷೇತ್ರದ ಭಂಡಾರವನ್ನು ಕಳೆದುಕೊಂಡಿರುವುದು ನೋವಿನ ಸಂಗತಿ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಬಸವಣ್ಣ ಅವರ ಚಿಂತನೆ ಫಲವಾಗಿ ಮಹಿಳೆಯರು ಸಾಧನೆಯತ್ತ ಮುಖ ಮಾಡಲು ಸಾಧ್ಯವಾಗಿದೆ. ಶೋಷಿತ ವರ್ಗ ಮುಖ್ಯವಾಹಿನಿಗೆ ಬರಲು ಸಹಕಾರಿ ಆಗಿದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.</p>.<p>ಸೀಬಾರ ಸಮೀಪದ ಕಚೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ತಾಲ್ಲೂಕು ಘಟಕದಿಂದ ಶುಕ್ರವಾರ ಆಯೋಜಿಸಿದ್ದ ‘ಬಸವ ಜಯಂತಿ’ಯಲ್ಲಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಅನುಭವ ಮಂಟಪದ ಪರಿಕಲ್ಪನೆಯಲ್ಲಿಯೇ ಅಂಬೇಡ್ಕರ್ ರಚಿಸಿದ ಸಂವಿಧಾನ ಇರುವುದು ವಿಶೇಷ’ ಎಂದರು.</p>.<p>‘ಅಂಧಶ್ರದ್ಧೆ, ಮೌಢ್ಯಾಚಾರಣೆ, ಅಸಮಾನತೆ ವಿರುದ್ಧ ನಿರಂತರ ಹೋರಾಟ ನಡೆಸಿ, ವೈಜ್ಞಾನಿಕ ಸಮಾಜ ನಿರ್ಮಾಣದ ಕನಸು ಕಂಡಿದ್ದ ಬಸವಣ್ಣನ ಆದರ್ಶಗಳನ್ನು ವಿವಿಧ ಮಠಾಧೀಶರು, ಧರ್ಮಾಧಿಕಾರಿಗಳು, ಪ್ರಜ್ಞಾವಂತರು, ಚಿಂತಕರು ಅನುಷ್ಠಾನಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಸರ್ವರ ಸಹಕಾರ ಅಗತ್ಯ’ ಎಂದು ಮನವಿ ಮಾಡಿದರು.</p>.<p>ವಿಜಯಮ್ಮ ಆಂಜನೇಯ, ಅರುಂಧತಿ ಆಂಜನೇಯ, ಕಾಂಗ್ರೆಸ್ ಪರಿಶಿಷ್ಟ ಜಾತಿ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕೋಟಿ, ಪ್ರದೀಪ್, ರಂಗಸ್ವಾಮಿ, ವಿರುಪಾಕ್ಷಪ್ಪ, ರೇಖಾ ಇದ್ದರು.</p>.<p><span class="quote">ಮಹದೇವ ನಿಧನಕ್ಕೆ ಸಂತಾಪ:</span> ‘ರಾಜಕೀಯ ವಿಶ್ಲೇಷಕ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ ಪತ್ರಿಕಾರಂಗಕ್ಕೆ ಮತ್ತು ನಾಡಿಗೆ ತುಂಬಲಾರದ ನಷ್ಟವಾಗಿದೆ’ ಎಂದು ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<p>‘ಮಹದೇವ ಪ್ರಕಾಶ್ ರಾಜ್ಯದ ರಾಜಕೀಯವನ್ನು ಚೆನ್ನಾಗಿ ಅಧ್ಯಯನ ಮಾಡಿದ್ದರು. ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪ ಅವರ ಕಾಲದಿಂದ ಈವರೆಗಿನ ಮುಖ್ಯಮಂತ್ರಿಗಳ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳ ಸಾಧನೆ ಹಾಗೂ ನಡೆದ ಘಟನೆಗಳ ಕುರಿತು ಅಂಕಿ-ಅಂಶಗಳ ಸಮೇತ ಬರೆಯುತ್ತಿದ್ದರು. ಪತ್ರಿಕಾ ಕ್ಷೇತ್ರದ ಭಂಡಾರವನ್ನು ಕಳೆದುಕೊಂಡಿರುವುದು ನೋವಿನ ಸಂಗತಿ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>