ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣ ವೇದಗಳ ವಿರೋಧಿ ಆಗಿರಲಿಲ್ಲ: ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Published 5 ನವೆಂಬರ್ 2023, 23:30 IST
Last Updated 5 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಸಿರಿಗೆರೆ: ‘ವಚನ ಸಾಹಿತ್ಯ ಓದಿಕೊಂಡವರೂ ‌ಮೂಲಭೂತವಾದಿ ಆಗುತ್ತಿರುವುದು ವಿಷಾದನೀಯ. ಲಿಂಗಾಯತ ಧರ್ಮದಲ್ಲೂ ಕೆಲವರು ಇಂತಹ ಗೊಂದಲ ಹಬ್ಬಿಸುತ್ತಿದ್ದಾರೆ‘ ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ತರಳಬಾಳು ಮಠ ಏರ್ಪಡಿಸಿದ್ದ ‘ವಚನ ಸಾಹಿತ್ಯದ ಪ್ರಸ್ತುತತೆ’ ವಿಷಯ ಕುರಿತ ಗೋಷ್ಠಿಯಲ್ಲಿ ಅವರು ಭಾನುವಾರ ಆಶೀರ್ವಚನ ನೀಡಿದರು.

‘ಬಸವಣ್ಣನವರು ವೇದ, ಉಪನಿಷತ್ತುಗಳ ವಿರೋಧಿಯಾಗಿದ್ದರು’ ಎಂಬ ತಪ್ಪು ಪ್ರಜ್ಞೆ ಈಗ ಮೂಡುತ್ತಿದೆ. ಬಸವಣ್ಣನವರು ವೇದಗಳ ವಿರೋಧಿ ಆಗಿರಲಿಲ್ಲ. ವಚನ ಸಾಹಿತ್ಯದಲ್ಲಿ ಮುಕ್ತ ಚಿಂತನೆಗಳಿದ್ದು, ಅವುಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

‘ವೇದಗಳಲ್ಲಿ ಕರ್ಮಕಾಂಡ ಮತ್ತು ಜ್ಞಾನಕಾಂಡ ಎಂಬ ಭಾಗಗಳಿವೆ. ಕರ್ಮಕಾಂಡದಲ್ಲಿ ಜೀವವಿರೋಧಿ ನಿಲುವು ತಾಳುವ ಪ್ರಾಣಿಬಲಿ ಮತ್ತು ಯಜ್ಞದ ವಿಚಾರಗಳಿವೆ. ಇಂತಹ ನಿಲುವುಗಳಿಗೆ ಬಸವಣ್ಣನವರು ಪ್ರತಿರೋಧ ವ್ಯಕ್ತಪಡಿಸಿದ್ದರೇ ವಿನಾ, ವೇದ ಮತ್ತು ಉಪನಿಷತ್ತುಗಳನ್ನು ಸಾರಾಸಗಟಾಗಿ ತಿರಸ್ಕರಿಸಿಲ್ಲ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT