ಇದೇ ಮಾರ್ಗದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಣ್ಣೆದುರೇ ಈ ಅಪಘಾತ ಸಂಭವಿಸಿದೆ. ತಕ್ಷಣ ನೆರವಿಗೆ ಧಾವಿಸಿದ ಹೊರಟ್ಟಿ, ಕಾರಿನಲ್ಲಿ ಸಿಲುಕಿದ್ದ ವರದರಾಜ, ಮಂಜುನಾಥ, ನಾಗೇಂದ್ರರಾವ್ ಮತ್ತು ಮೋಹನ್ ಕುಮಾರ್ ಅವರನ್ನು ರಕ್ಷಿಸಿದ್ದಾರೆ. ಪ್ರಥಮ ಚಿಕಿತ್ಸೆ ಕೊಡಿಸಿ, ಪೊಲೀಸರು ಹಾಗೂ ಆಂಬುಲೆನ್ಸ್ಗೆ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿದ್ದಾರೆ.