<p>ಚಿತ್ರದುರ್ಗ: ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯನ್ನು ಏ.28ರಿಂದ 30ರ ವರೆಗೆ ಅರ್ಥಪೂರ್ಣವಾಗಿ ಆಚರಿಸಲು ಮುರುಘಾ ಮಠದಲ್ಲಿ ಸಿದ್ಧತೆ ನಡೆದಿವೆ. ಮೂರು ದಿನ ವಿವಿಧ ಸ್ಪರ್ಧೆ, ಸಂವಾದ, ಗೋಷ್ಠಿ ನಡೆಯಲಿವೆ. </p>.<p>28ರಂದು ಬೆಳಿಗ್ಗೆ ಮಠದ ಆವರಣದಲ್ಲಿ ಮಕ್ಕಳಿಗೆ ಹಾಗೂ ಹಿರಿಯರಿಗೆ ವಚನ ಕಂಠಪಾಠ ಸ್ಪರ್ಧೆ, ಮಹಿಳೆಯರಿಗೆ ಸಾಂಪ್ರದಾಯಿಕ ಮತ್ತು ಬಸವಾದಿ ಶಿವಶರಣರ ಭಾವಚಿತ್ರಗಳ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ವಯಸ್ಕರು ಹಾಗೂ ಮಕ್ಕಳಿಗೆ ಶಿವಶರಣರ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ. </p>.<p>ಸಂಜೆ 6 ಗಂಟೆಗೆ ಅನುಭವ ಮಂಟಪದಲ್ಲಿ ಚಿಂತನಗೋಷ್ಠಿ ನಡೆಯಲಿದ್ದು, ಮೈಸೂರಿನ ಕುಂದೂರು ಮಠದ ಶರಶ್ಚಚಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಸವ ಬೆರಗು (ಶರಣರ ದೃಷ್ಟಿಯಲ್ಲಿ ಬಸವಣ್ಣನವರು) ವಿಷಯ ಕುರಿತು ಚಿಂತನ ನೀಡುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸಲಿದ್ದು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಶರಣ ಸಂಸ್ಕೃತಿ ನಿಜಾಚರಣೆಗಳು ವಿಷಯಾವಲೋಕನ ಮಾಡುವರು.</p>.<p>ಅತಿಥಿಗಳಾಗಿ ಸಂಸದ ಗೋವಿಂದ ಕಾರಜೋಳ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಎಸ್ಜೆಎಂ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳು ವಚನ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ. ಗಾನಯಾಗಿ ಸಂಗೀತ ಬಳಗದ ಅಧ್ಯಕ್ಷ ತೋಟಪ್ಪ ಉತ್ತಂಗಿ ವಚನ ಸಂಗೀತ ನಡೆಸಿಕೊಡಲಿದ್ದಾರೆ.</p>.<p>29ರಂದು ಬೆಳಿಗ್ಗೆ 10 ಗಂಟೆಗೆ ಪಿಯುಸಿ ಹಾಗೂ ಪದವೀಧರರಿಗೆ ಸಾಂಸ್ಕೃತಿಕ ನಾಯಕ ಬಸವಣ್ಣ ಕುರಿತು ಭಾಷಣ ಸ್ಪರ್ಧೆ, 18 ವರ್ಷ ಮೇಲ್ಪಟ್ಟವರಿಗೆ ಸರ್ವ ಶರಣರ ದೃಷ್ಟಿಯಲ್ಲಿ ಬಸವಣ್ಣ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಸಂಜೆ 6 ಗಂಟೆಗೆ ಬಸವಣ್ಣನವರ ಆರ್ಥಿಕ ಚಿಂತನೆಗಳು ಕುರಿತು ಚಿಂತನ ಗೋಷ್ಠಿ ನಡೆಯಲಿದ್ದು, ಇಳಕಲ್ನ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್.ತಿಪ್ಪೇಸ್ವಾಮಿ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಉಪಸ್ಥಿತರಿರುವರು.</p>.<p>ಇತಿಹಾಸ ಸಂಶೋಧಕ ಬಿ.ರಾಜಶೇಖರಪ್ಪ ಅವರ ಸಂಪಾದಕತ್ವದಲ್ಲಿ ಶ್ರೀಮಠದಿಂದ ಹಿಒಸತ್ಯಶುದ್ಧ ಕಾಯಕ ಎಂಬ ತ್ರೈಮಾಸಿಕ ಪತ್ರಿಕೆ ಬಿಡುಗಡೆಯಾಗಲಿದೆ. ಅಂದಿನ ಸಮಾರಂಭದಲ್ಲಿ ಆರ್ಥಿಕ ಚಿಂತಕರಾದ ಹೊಸಪೇಟೆಯ ಟಿ.ಆರ್. ಚಂದ್ರಶೇಖರ್ ಅವರು ಬಸವಣ್ಣನವರ ಆರ್ಥಿಕ ಚಿಂತನೆಗಳು ವಿಷಯ ಮಂಡನೆ ಮಾಡುವರು.</p>.<p>ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಮುದ್ದು ಮೋಹನ್ ವಚನ ಗಾಯನ ನಡೆಸಿಕೊಡಲಿದ್ದಾರೆ. ಎಸ್ಜೆಎಂ ದಂತ ವೈದ್ಯಕೀಯ ವಿದ್ಯಾಲಯದ ವಿದ್ಯಾರ್ಥಿಗಳು ಅನುಭವ ಮಂಟಪ ನೃತ್ಯ ರೂಪಕ, ಎಸ್ಜೆಎಂ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳು ಮತದಾನ ಜಾಗೃತಿ ರೂಪಕ ಪ್ರಸ್ತುತ ಪಡಿಸಲಿದ್ದಾರೆ.</p>.<p>30ರ ಬೆಳಿಗ್ಗೆ 10 ಗಂಟೆಗೆ ಬಸವಣ್ಣನವರ ಜಯಂತೋತ್ಸವನ್ನು ಗೋನೂರು ನಿರಾಶ್ರಿತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವ ಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಅತಿಥಿಗಳಾಗಿ ಆಡಳಿತ ಮಂಡಳಿ ಸದಸ್ಯರಾದ ಪಿ.ಎಸ್.ಶಂಕರ್, ಎಸ್.ಎನ್.ಚಂದ್ರಶೇಖರ್ ಭಾಗವಹಿಸಲಿದ್ದಾರೆ. ರಾಯಚೂರು ಬಸವ ಸೇವಾ ಪ್ರತಿಷ್ಠಾನದ ಶರಣ ಬಸವರಾಜ ಸ್ವಾಮೀಜಿ ಅವರನ್ನು ಸನ್ಮಾನಿಸಲಾಗುತ್ತದೆ.</p>.<p>Cut-off box - ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಬಸವೇಶ್ವರ ಜಯಂತಿ ಅಂಗವಾಗಿ 30 ರ ಸಂಜೆ 4 ಗಂಟೆಗೆ ನೀಲಕಂಠೇಶ್ವರ ದೇವಸ್ಥಾನದ ಆವರಣದಿಂದ ಬಸವೇಶ್ವರರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಗಾಂಧಿವೃತ್ತ ಆನೆಬಾಗಿಲು ದೊಡ್ಡಪೇಟೆ ರಂಗಯ್ಯನಬಾಗಿಲು ಬಸವಮಂಟಪ ರಸ್ತೆ ಅಂಬೇಡ್ಕರ್ ವೃತ್ತ ಬಿ.ಡಿ ರಸ್ತೆಯ ಮೂಲಕ ದೇವಸ್ಥಾನ ತಲುಪಲಿದೆ. ಮುರುಘಾ ಮಠದ ಖಾಸಮಠ ಶಾಖಾಮಠಗಳ ಹಾಗೂ ವಿವಿಧ ಸಮಾಜದ ಪೂಜ್ಯರುಗಳು ಆಗಮಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯನ್ನು ಏ.28ರಿಂದ 30ರ ವರೆಗೆ ಅರ್ಥಪೂರ್ಣವಾಗಿ ಆಚರಿಸಲು ಮುರುಘಾ ಮಠದಲ್ಲಿ ಸಿದ್ಧತೆ ನಡೆದಿವೆ. ಮೂರು ದಿನ ವಿವಿಧ ಸ್ಪರ್ಧೆ, ಸಂವಾದ, ಗೋಷ್ಠಿ ನಡೆಯಲಿವೆ. </p>.<p>28ರಂದು ಬೆಳಿಗ್ಗೆ ಮಠದ ಆವರಣದಲ್ಲಿ ಮಕ್ಕಳಿಗೆ ಹಾಗೂ ಹಿರಿಯರಿಗೆ ವಚನ ಕಂಠಪಾಠ ಸ್ಪರ್ಧೆ, ಮಹಿಳೆಯರಿಗೆ ಸಾಂಪ್ರದಾಯಿಕ ಮತ್ತು ಬಸವಾದಿ ಶಿವಶರಣರ ಭಾವಚಿತ್ರಗಳ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ವಯಸ್ಕರು ಹಾಗೂ ಮಕ್ಕಳಿಗೆ ಶಿವಶರಣರ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ. </p>.<p>ಸಂಜೆ 6 ಗಂಟೆಗೆ ಅನುಭವ ಮಂಟಪದಲ್ಲಿ ಚಿಂತನಗೋಷ್ಠಿ ನಡೆಯಲಿದ್ದು, ಮೈಸೂರಿನ ಕುಂದೂರು ಮಠದ ಶರಶ್ಚಚಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಸವ ಬೆರಗು (ಶರಣರ ದೃಷ್ಟಿಯಲ್ಲಿ ಬಸವಣ್ಣನವರು) ವಿಷಯ ಕುರಿತು ಚಿಂತನ ನೀಡುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸಲಿದ್ದು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಶರಣ ಸಂಸ್ಕೃತಿ ನಿಜಾಚರಣೆಗಳು ವಿಷಯಾವಲೋಕನ ಮಾಡುವರು.</p>.<p>ಅತಿಥಿಗಳಾಗಿ ಸಂಸದ ಗೋವಿಂದ ಕಾರಜೋಳ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಎಸ್ಜೆಎಂ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳು ವಚನ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ. ಗಾನಯಾಗಿ ಸಂಗೀತ ಬಳಗದ ಅಧ್ಯಕ್ಷ ತೋಟಪ್ಪ ಉತ್ತಂಗಿ ವಚನ ಸಂಗೀತ ನಡೆಸಿಕೊಡಲಿದ್ದಾರೆ.</p>.<p>29ರಂದು ಬೆಳಿಗ್ಗೆ 10 ಗಂಟೆಗೆ ಪಿಯುಸಿ ಹಾಗೂ ಪದವೀಧರರಿಗೆ ಸಾಂಸ್ಕೃತಿಕ ನಾಯಕ ಬಸವಣ್ಣ ಕುರಿತು ಭಾಷಣ ಸ್ಪರ್ಧೆ, 18 ವರ್ಷ ಮೇಲ್ಪಟ್ಟವರಿಗೆ ಸರ್ವ ಶರಣರ ದೃಷ್ಟಿಯಲ್ಲಿ ಬಸವಣ್ಣ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಸಂಜೆ 6 ಗಂಟೆಗೆ ಬಸವಣ್ಣನವರ ಆರ್ಥಿಕ ಚಿಂತನೆಗಳು ಕುರಿತು ಚಿಂತನ ಗೋಷ್ಠಿ ನಡೆಯಲಿದ್ದು, ಇಳಕಲ್ನ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್.ತಿಪ್ಪೇಸ್ವಾಮಿ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಉಪಸ್ಥಿತರಿರುವರು.</p>.<p>ಇತಿಹಾಸ ಸಂಶೋಧಕ ಬಿ.ರಾಜಶೇಖರಪ್ಪ ಅವರ ಸಂಪಾದಕತ್ವದಲ್ಲಿ ಶ್ರೀಮಠದಿಂದ ಹಿಒಸತ್ಯಶುದ್ಧ ಕಾಯಕ ಎಂಬ ತ್ರೈಮಾಸಿಕ ಪತ್ರಿಕೆ ಬಿಡುಗಡೆಯಾಗಲಿದೆ. ಅಂದಿನ ಸಮಾರಂಭದಲ್ಲಿ ಆರ್ಥಿಕ ಚಿಂತಕರಾದ ಹೊಸಪೇಟೆಯ ಟಿ.ಆರ್. ಚಂದ್ರಶೇಖರ್ ಅವರು ಬಸವಣ್ಣನವರ ಆರ್ಥಿಕ ಚಿಂತನೆಗಳು ವಿಷಯ ಮಂಡನೆ ಮಾಡುವರು.</p>.<p>ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಮುದ್ದು ಮೋಹನ್ ವಚನ ಗಾಯನ ನಡೆಸಿಕೊಡಲಿದ್ದಾರೆ. ಎಸ್ಜೆಎಂ ದಂತ ವೈದ್ಯಕೀಯ ವಿದ್ಯಾಲಯದ ವಿದ್ಯಾರ್ಥಿಗಳು ಅನುಭವ ಮಂಟಪ ನೃತ್ಯ ರೂಪಕ, ಎಸ್ಜೆಎಂ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳು ಮತದಾನ ಜಾಗೃತಿ ರೂಪಕ ಪ್ರಸ್ತುತ ಪಡಿಸಲಿದ್ದಾರೆ.</p>.<p>30ರ ಬೆಳಿಗ್ಗೆ 10 ಗಂಟೆಗೆ ಬಸವಣ್ಣನವರ ಜಯಂತೋತ್ಸವನ್ನು ಗೋನೂರು ನಿರಾಶ್ರಿತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವ ಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಅತಿಥಿಗಳಾಗಿ ಆಡಳಿತ ಮಂಡಳಿ ಸದಸ್ಯರಾದ ಪಿ.ಎಸ್.ಶಂಕರ್, ಎಸ್.ಎನ್.ಚಂದ್ರಶೇಖರ್ ಭಾಗವಹಿಸಲಿದ್ದಾರೆ. ರಾಯಚೂರು ಬಸವ ಸೇವಾ ಪ್ರತಿಷ್ಠಾನದ ಶರಣ ಬಸವರಾಜ ಸ್ವಾಮೀಜಿ ಅವರನ್ನು ಸನ್ಮಾನಿಸಲಾಗುತ್ತದೆ.</p>.<p>Cut-off box - ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಬಸವೇಶ್ವರ ಜಯಂತಿ ಅಂಗವಾಗಿ 30 ರ ಸಂಜೆ 4 ಗಂಟೆಗೆ ನೀಲಕಂಠೇಶ್ವರ ದೇವಸ್ಥಾನದ ಆವರಣದಿಂದ ಬಸವೇಶ್ವರರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಗಾಂಧಿವೃತ್ತ ಆನೆಬಾಗಿಲು ದೊಡ್ಡಪೇಟೆ ರಂಗಯ್ಯನಬಾಗಿಲು ಬಸವಮಂಟಪ ರಸ್ತೆ ಅಂಬೇಡ್ಕರ್ ವೃತ್ತ ಬಿ.ಡಿ ರಸ್ತೆಯ ಮೂಲಕ ದೇವಸ್ಥಾನ ತಲುಪಲಿದೆ. ಮುರುಘಾ ಮಠದ ಖಾಸಮಠ ಶಾಖಾಮಠಗಳ ಹಾಗೂ ವಿವಿಧ ಸಮಾಜದ ಪೂಜ್ಯರುಗಳು ಆಗಮಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>