<p><strong>ಚಿತ್ರದುರ್ಗ:</strong> ಪ್ರಸಕ್ತ ಬಜೆಟ್ನಲ್ಲಿ ಸರ್ಕಾರ ಘೋಷಿಸಿದ ₹ 45 ಕೋಟಿ ಅನುದಾನದ ಕ್ರಿಯಾ ಯೋಜನೆ, ಕಾಮಗಾರಿ ಪರಿಶೀಲನೆಗೆ ತಂಡ ರಚನೆ, ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಶಾಲೆ ನಿರ್ಮಾಣ ಸೇರಿ ಹಲವು ಕಾರ್ಯಚಟುವಟಿಕೆಗಳಿಗೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆ ಒಪ್ಪಿಗೆ ನೀಡಿತು.</p>.<p>ಮಂಡಳಿಯ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಎನ್.ಇ.ಜೀವನಮೂರ್ತಿ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು. 2021-22 ನೇ ಸಾಲಿನ ವಾರ್ಷಿಕ ಆಡಳಿತ ವರದಿ, 2022-23 ನೇ ಸಾಲಿನ ಕ್ರಿಯಾ ಯೋಜನೆ ಹಾಗೂ 2015-16 ರಿಂದ 2020-21ನೇ ಸಾಲಿನ ವರಗಿನ ವಾರ್ಷಿಕ ಲೆಕ್ಕಪತ್ರಗಳ ತಪಾಸಣಾ ವರದಿಗಳನ್ನು ಅನುಮೋದಿಸಿ ಚರ್ಚಿಸಲಾಯಿತು.</p>.<p>₹ 45 ಕೋಟಿ ಅನುದಾನದಲ್ಲಿ ₹ 34 ಕೋಟಿ ಬಂಡವಾಳ ವೆಚ್ಚವಾಗಿ ಬಳಕೆ ಮಾಡಲಾಗುತ್ತದೆ. ವಿಶೇಷ ಘಟಕ ಯೋಜನೆಯಡಿ ₹ 7 ಕೋಟಿ ರೂಪಾಯಿ ಹಾಗೂ ಗಿರಿಜನ ಉಪಯೋಜನೆಯಡಿ ₹ 3 ಕೋಟಿ ವೆಚ್ಚ ಮಾಡಲು ಅಧ್ಯಕ್ಷರು ಪ್ರಸ್ತಾವ ಮಂಡಿಸಿದರು. ಸಭೆಗೆ ಹಾಜರಿದ್ದ ಎಲ್ಲ ಸದಸ್ಯರು ಇದಕ್ಕೆ ಸಮ್ಮತಿ ಸೂಚಿಸಿದರು.</p>.<p>ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾದರಿ ಶಾಲೆ ನಿರ್ಮಾಣದ ಬಗ್ಗೆ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಸ್ತಾಪಿಸಿದರು. ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಮಾದರಿ ಶಾಲೆ ನಿರ್ಮಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರದಿ ಪಡೆಯುವ ಸಲಹೆ ಕೇಳಿಬಂದಿತು.</p>.<p>‘ಪರಿಶಿಷ್ಟ ಜಾತಿ ಹಾಗೂ ಪಂಗಡ, ಹಿಂದುಳಿದ ವರ್ಗದ ಜನರು ಹೆಚ್ಚಾಗಿರುವ ಪ್ರದೇಶದಲ್ಲಿ ಮಾದರಿ ಶಾಲೆ ನಿರ್ಮಿಸಬೇಕು. ಮುಂದಿನ ದಿನಗಳಲ್ಲಿ ಮಂಡಳಿ ವ್ಯಾಪ್ತಿಯ ಎಲ್ಲ ತಾಲ್ಲೂಕಿಗೂ ಈ ಯೋಜನೆ ವಿಸ್ತರಿಸಬೇಕು’ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸಲಹೆ ನೀಡಿದರು.</p>.<p>ಮಂಡಳಿ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಗಳ ಪರಿಶೀಲನೆಗೆ ಕಾರ್ಯದರ್ಶಿ ಹಾಗೂ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲು ಸಮ್ಮತಿಸಲಾಯಿತು.</p>.<p>ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ‘ಅಧ್ಯಕ್ಷರು ಒಬ್ಬರೇ ಕಾಮಗಾರಿ ಪರಿಶೀಲಿಸಲು ಸಾಧ್ಯವಿಲ್ಲ. ಮಂಡಳಿಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಅಧಿಕಾರಿಗಳ ತಂಡ ರಚನೆ ಮಾಡುವುದು ಸೂಕ್ತ’ ಎಂದು ಸಲಹೆ ನೀಡಿದರು. ಕಾಮಗಾರಿ ಸ್ಥಳದಲ್ಲಿ ಅಳವಡಿಸುವ ಫಲಕದಲ್ಲಿ ಮಂಡಳಿಯ ಹೆಸರು ಕಡ್ಡಾಯವಾಗಿ ನಮೂದಿಸುವಂತೆಯೂ ಚರ್ಚೆ ನಡೆಯಿತು.</p>.<p>‘ಮಂಡಳಿಯ ವಾರ್ಷಿಕ ಲೆಕ್ಕಪತ್ರ ವರದಿಯನ್ನು ಆಯಾ ವರ್ಷವೇ ಪೂರ್ಣಗೊಳಿಸಬೇಕು. ಇದನ್ನು ವಾರ್ಷಿಕ ಸಭೆಯಲ್ಲಿ ಮಂಡಿಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೂಚಿಸಿದರು.</p>.<p>ಮಂಡಳಿ ವ್ಯಾಪ್ತಿಗೆ ಒಳಪಡುವ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಕ್ಕೆ ಮೂಲಸೌಲಭ್ಯ ಕಲ್ಪಿಸಲು ₹ 8 ಕೋಟಿ ಅನುದಾನ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲು ಸಭೆ ತೀರ್ಮಾನಿಸಿತು.</p>.<p class="Subhead"><strong>‘15 ದಿನಗಳಲ್ಲಿ ಸ್ಥಳಾಂತರ’</strong></p>.<p>ಸುಡುಗಾಡು ಸಿದ್ದರ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀಡಿದ ಭೂಮಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದ್ದು, 15 ದಿನಗಳಲ್ಲಿ ಅವರು ಸ್ಥಳಾಂತರವಾಗಬಹುದು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.</p>.<p>‘58 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. ಶೀಘ್ರವೇ ಬಡಾವಣೆ ವಿನ್ಯಾಸ ಪೂರ್ಣಗೊಳಿಸಲಾಗುವುದು. ಕುಡಿಯುವ ನೀರಿಗೆ ಎರಡು ಕೊಳವೆ ಬಾವಿ ಕೊರೆಸಬೇಕು’ ಎಂದರು.</p>.<p>ಮಂಡಳಿಯ ನಾಮನಿರ್ದೇಶಿತ ಸದಸ್ಯರಾದ ಶ್ಯಾಮಲಾ ಶಿವಪ್ರಕಾಶ್, ಸುಧೀರ್ ರಾಮಸಾ ಕಾಟಿಗರ್, ಕಾರ್ಯದರ್ಶಿ ಡಾ.ಶ್ರೀಧರ ಭಿ.ಭಜಂತ್ರಿ ಇದ್ದರು.</p>.<p>***</p>.<p>ನಬಾರ್ಡ್ನಿಂದ ಈ ಮೊದಲು ಅನುದಾನ ತರಲಾಗುತ್ತಿತ್ತು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹ 5 ಕೋಟಿ ಅನುದಾನವನ್ನು ನಬಾರ್ಡ್ನಿಂದ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು.<br />ಜಿ.ಎಚ್.ತಿಪ್ಪಾರೆಡ್ಡಿ, ಶಾಸಕ<br />ಚಿತ್ರದುರ್ಗ</p>.<p>***</p>.<p>ಅನುದಾನವನ್ನು ಆಯಾ ವರ್ಷವೇ ಬಳಕೆ ಮಾಡಬೇಕು. ಕಾಮಗಾರಿ ಅನುಷ್ಠಾನ ತಡವಾದರೆ ಜನರಿಗೆ ಸೇವೆ ನೀಡಲು ಸಾಧ್ಯವಾಗುವುದಿಲ್ಲ. ಯೋಜನಾ ವೆಚ್ಚವೂ ಅಧಿಕವಾಗುತ್ತದೆ.<br />ವಿರೂಪಾಕ್ಷಪ್ಪ ಬಳ್ಳಾರಿ, ಶಾಸಕ<br />ಬ್ಯಾಡಗಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಪ್ರಸಕ್ತ ಬಜೆಟ್ನಲ್ಲಿ ಸರ್ಕಾರ ಘೋಷಿಸಿದ ₹ 45 ಕೋಟಿ ಅನುದಾನದ ಕ್ರಿಯಾ ಯೋಜನೆ, ಕಾಮಗಾರಿ ಪರಿಶೀಲನೆಗೆ ತಂಡ ರಚನೆ, ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಶಾಲೆ ನಿರ್ಮಾಣ ಸೇರಿ ಹಲವು ಕಾರ್ಯಚಟುವಟಿಕೆಗಳಿಗೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಭೆ ಒಪ್ಪಿಗೆ ನೀಡಿತು.</p>.<p>ಮಂಡಳಿಯ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಎನ್.ಇ.ಜೀವನಮೂರ್ತಿ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಜರುಗಿತು. 2021-22 ನೇ ಸಾಲಿನ ವಾರ್ಷಿಕ ಆಡಳಿತ ವರದಿ, 2022-23 ನೇ ಸಾಲಿನ ಕ್ರಿಯಾ ಯೋಜನೆ ಹಾಗೂ 2015-16 ರಿಂದ 2020-21ನೇ ಸಾಲಿನ ವರಗಿನ ವಾರ್ಷಿಕ ಲೆಕ್ಕಪತ್ರಗಳ ತಪಾಸಣಾ ವರದಿಗಳನ್ನು ಅನುಮೋದಿಸಿ ಚರ್ಚಿಸಲಾಯಿತು.</p>.<p>₹ 45 ಕೋಟಿ ಅನುದಾನದಲ್ಲಿ ₹ 34 ಕೋಟಿ ಬಂಡವಾಳ ವೆಚ್ಚವಾಗಿ ಬಳಕೆ ಮಾಡಲಾಗುತ್ತದೆ. ವಿಶೇಷ ಘಟಕ ಯೋಜನೆಯಡಿ ₹ 7 ಕೋಟಿ ರೂಪಾಯಿ ಹಾಗೂ ಗಿರಿಜನ ಉಪಯೋಜನೆಯಡಿ ₹ 3 ಕೋಟಿ ವೆಚ್ಚ ಮಾಡಲು ಅಧ್ಯಕ್ಷರು ಪ್ರಸ್ತಾವ ಮಂಡಿಸಿದರು. ಸಭೆಗೆ ಹಾಜರಿದ್ದ ಎಲ್ಲ ಸದಸ್ಯರು ಇದಕ್ಕೆ ಸಮ್ಮತಿ ಸೂಚಿಸಿದರು.</p>.<p>ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾದರಿ ಶಾಲೆ ನಿರ್ಮಾಣದ ಬಗ್ಗೆ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಸ್ತಾಪಿಸಿದರು. ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಮಾದರಿ ಶಾಲೆ ನಿರ್ಮಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರದಿ ಪಡೆಯುವ ಸಲಹೆ ಕೇಳಿಬಂದಿತು.</p>.<p>‘ಪರಿಶಿಷ್ಟ ಜಾತಿ ಹಾಗೂ ಪಂಗಡ, ಹಿಂದುಳಿದ ವರ್ಗದ ಜನರು ಹೆಚ್ಚಾಗಿರುವ ಪ್ರದೇಶದಲ್ಲಿ ಮಾದರಿ ಶಾಲೆ ನಿರ್ಮಿಸಬೇಕು. ಮುಂದಿನ ದಿನಗಳಲ್ಲಿ ಮಂಡಳಿ ವ್ಯಾಪ್ತಿಯ ಎಲ್ಲ ತಾಲ್ಲೂಕಿಗೂ ಈ ಯೋಜನೆ ವಿಸ್ತರಿಸಬೇಕು’ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸಲಹೆ ನೀಡಿದರು.</p>.<p>ಮಂಡಳಿ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಗಳ ಪರಿಶೀಲನೆಗೆ ಕಾರ್ಯದರ್ಶಿ ಹಾಗೂ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲು ಸಮ್ಮತಿಸಲಾಯಿತು.</p>.<p>ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ‘ಅಧ್ಯಕ್ಷರು ಒಬ್ಬರೇ ಕಾಮಗಾರಿ ಪರಿಶೀಲಿಸಲು ಸಾಧ್ಯವಿಲ್ಲ. ಮಂಡಳಿಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಅಧಿಕಾರಿಗಳ ತಂಡ ರಚನೆ ಮಾಡುವುದು ಸೂಕ್ತ’ ಎಂದು ಸಲಹೆ ನೀಡಿದರು. ಕಾಮಗಾರಿ ಸ್ಥಳದಲ್ಲಿ ಅಳವಡಿಸುವ ಫಲಕದಲ್ಲಿ ಮಂಡಳಿಯ ಹೆಸರು ಕಡ್ಡಾಯವಾಗಿ ನಮೂದಿಸುವಂತೆಯೂ ಚರ್ಚೆ ನಡೆಯಿತು.</p>.<p>‘ಮಂಡಳಿಯ ವಾರ್ಷಿಕ ಲೆಕ್ಕಪತ್ರ ವರದಿಯನ್ನು ಆಯಾ ವರ್ಷವೇ ಪೂರ್ಣಗೊಳಿಸಬೇಕು. ಇದನ್ನು ವಾರ್ಷಿಕ ಸಭೆಯಲ್ಲಿ ಮಂಡಿಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೂಚಿಸಿದರು.</p>.<p>ಮಂಡಳಿ ವ್ಯಾಪ್ತಿಗೆ ಒಳಪಡುವ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಕ್ಕೆ ಮೂಲಸೌಲಭ್ಯ ಕಲ್ಪಿಸಲು ₹ 8 ಕೋಟಿ ಅನುದಾನ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲು ಸಭೆ ತೀರ್ಮಾನಿಸಿತು.</p>.<p class="Subhead"><strong>‘15 ದಿನಗಳಲ್ಲಿ ಸ್ಥಳಾಂತರ’</strong></p>.<p>ಸುಡುಗಾಡು ಸಿದ್ದರ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀಡಿದ ಭೂಮಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದ್ದು, 15 ದಿನಗಳಲ್ಲಿ ಅವರು ಸ್ಥಳಾಂತರವಾಗಬಹುದು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.</p>.<p>‘58 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. ಶೀಘ್ರವೇ ಬಡಾವಣೆ ವಿನ್ಯಾಸ ಪೂರ್ಣಗೊಳಿಸಲಾಗುವುದು. ಕುಡಿಯುವ ನೀರಿಗೆ ಎರಡು ಕೊಳವೆ ಬಾವಿ ಕೊರೆಸಬೇಕು’ ಎಂದರು.</p>.<p>ಮಂಡಳಿಯ ನಾಮನಿರ್ದೇಶಿತ ಸದಸ್ಯರಾದ ಶ್ಯಾಮಲಾ ಶಿವಪ್ರಕಾಶ್, ಸುಧೀರ್ ರಾಮಸಾ ಕಾಟಿಗರ್, ಕಾರ್ಯದರ್ಶಿ ಡಾ.ಶ್ರೀಧರ ಭಿ.ಭಜಂತ್ರಿ ಇದ್ದರು.</p>.<p>***</p>.<p>ನಬಾರ್ಡ್ನಿಂದ ಈ ಮೊದಲು ಅನುದಾನ ತರಲಾಗುತ್ತಿತ್ತು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹ 5 ಕೋಟಿ ಅನುದಾನವನ್ನು ನಬಾರ್ಡ್ನಿಂದ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು.<br />ಜಿ.ಎಚ್.ತಿಪ್ಪಾರೆಡ್ಡಿ, ಶಾಸಕ<br />ಚಿತ್ರದುರ್ಗ</p>.<p>***</p>.<p>ಅನುದಾನವನ್ನು ಆಯಾ ವರ್ಷವೇ ಬಳಕೆ ಮಾಡಬೇಕು. ಕಾಮಗಾರಿ ಅನುಷ್ಠಾನ ತಡವಾದರೆ ಜನರಿಗೆ ಸೇವೆ ನೀಡಲು ಸಾಧ್ಯವಾಗುವುದಿಲ್ಲ. ಯೋಜನಾ ವೆಚ್ಚವೂ ಅಧಿಕವಾಗುತ್ತದೆ.<br />ವಿರೂಪಾಕ್ಷಪ್ಪ ಬಳ್ಳಾರಿ, ಶಾಸಕ<br />ಬ್ಯಾಡಗಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>