<p><strong>ಹಿರಿಯೂರು: </strong>‘ತಲೆಬುಡವಿಲ್ಲದ ಗಾಳಿ ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷದ ವರಿಷ್ಠರು ಬಹಳ ಹಿಂದೆಯೇ ಚುನಾವಣಾ ಪ್ರಚಾರ ನಡೆಸಲು ಹಸಿರು ನಿಶಾನೆ ತೋರಿಸಿದ್ದು, ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಬಗ್ಗೆ ಯಾವುದೇ ಸಂದೇಹಗಳಿಲ್ಲ’ ಎಂದು ಮಾಜಿ ಸಚಿವ ಡಿ. ಸುಧಾಕರ್ ಸ್ಪಷ್ಟಪಡಿಸಿದರು.</p>.<p>ತಾಲ್ಲೂಕಿನ ಕೂನಿಕೆರೆ, ಹುಚ್ಚವ್ವನಹಳ್ಳಿ, ದೊಡ್ಡಘಟ್ಟ ಗ್ರಾಮಗಳಲ್ಲಿ ಭಾನುವಾರ ಬೆಂಬಲಿಗರೊಂದಿಗೆ ಪ್ರಚಾರ ನಡೆಸಿದ ಅವರು<br />ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಪಕ್ಷಸಂಘಟನೆಗೆ ದುಡಿದವರನ್ನು ಕಾಂಗ್ರೆಸ್ ಎಂದೂ ಕೈಬಿಟ್ಟಿಲ್ಲ. 2018ರ ಚುನಾವಣೆಯಲ್ಲಿ ಸೋತ ನಂತರವೂ ಕ್ಷೇತ್ರ ಬಿಟ್ಟು ಹೋಗದೆ, ಹಿರಿಯೂರಿನಲ್ಲಿ ಮಾಡಿದ್ದ ಮನೆಯಲ್ಲಿಯೇ ವಾಸ್ತವ್ಯ ಮುಂದುವರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಕೋವಿಡ್ ಸಮಯದಲ್ಲಿ ಸಂತ್ರಸ್ತರಿಗೆ ಸಲ್ಲಿಸಿದ ಸೇವೆಯನ್ನು ಜನ ಮರೆತಿಲ್ಲ’ ಎಂದು ಹೇಳಿದರು.</p>.<p>’ನನ್ನ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದೇನೆ. ಹಿಂದಿನ ಮೂರೂವರೆ ವರ್ಷದ ಬಿಜೆಪಿ ಆಡಳಿತದ ಬಗ್ಗೆ ಮತದಾರರಲ್ಲಿ ಬೇಸರ ಮೂಡಿದೆ’ ಎಂದರು.</p>.<p>‘ಹಿರಿಯೂರು ನಗರವೂ ಒಳಗೊಂಡು ಕ್ಷೇತ್ರದ ಯಾವುದೇ ಭಾಗದ ಹಳ್ಳಿಗೆ ಹೋದರೂ ಜನರಿಂದ ಅಭೂತಪೂರ್ವ ಸ್ವಾಗತ ದೊರೆಯುತ್ತಿದೆ. ಇದನ್ನೆಲ್ಲ ಹೈಕಮಾಂಡ್ ನೋಡುತ್ತಿದೆ. ಪ್ರಯುಕ್ತ ಟಿಕೆಟ್ ವಿಷಯಕ್ಕೆ ತಲೆಕೆಡಿಸಿಕೊಳ್ಳದೆ<br />ಪ್ರಚಾರದಲ್ಲಿ ತೊಡಗಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>‘ತಲೆಬುಡವಿಲ್ಲದ ಗಾಳಿ ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷದ ವರಿಷ್ಠರು ಬಹಳ ಹಿಂದೆಯೇ ಚುನಾವಣಾ ಪ್ರಚಾರ ನಡೆಸಲು ಹಸಿರು ನಿಶಾನೆ ತೋರಿಸಿದ್ದು, ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಬಗ್ಗೆ ಯಾವುದೇ ಸಂದೇಹಗಳಿಲ್ಲ’ ಎಂದು ಮಾಜಿ ಸಚಿವ ಡಿ. ಸುಧಾಕರ್ ಸ್ಪಷ್ಟಪಡಿಸಿದರು.</p>.<p>ತಾಲ್ಲೂಕಿನ ಕೂನಿಕೆರೆ, ಹುಚ್ಚವ್ವನಹಳ್ಳಿ, ದೊಡ್ಡಘಟ್ಟ ಗ್ರಾಮಗಳಲ್ಲಿ ಭಾನುವಾರ ಬೆಂಬಲಿಗರೊಂದಿಗೆ ಪ್ರಚಾರ ನಡೆಸಿದ ಅವರು<br />ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಪಕ್ಷಸಂಘಟನೆಗೆ ದುಡಿದವರನ್ನು ಕಾಂಗ್ರೆಸ್ ಎಂದೂ ಕೈಬಿಟ್ಟಿಲ್ಲ. 2018ರ ಚುನಾವಣೆಯಲ್ಲಿ ಸೋತ ನಂತರವೂ ಕ್ಷೇತ್ರ ಬಿಟ್ಟು ಹೋಗದೆ, ಹಿರಿಯೂರಿನಲ್ಲಿ ಮಾಡಿದ್ದ ಮನೆಯಲ್ಲಿಯೇ ವಾಸ್ತವ್ಯ ಮುಂದುವರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಕೋವಿಡ್ ಸಮಯದಲ್ಲಿ ಸಂತ್ರಸ್ತರಿಗೆ ಸಲ್ಲಿಸಿದ ಸೇವೆಯನ್ನು ಜನ ಮರೆತಿಲ್ಲ’ ಎಂದು ಹೇಳಿದರು.</p>.<p>’ನನ್ನ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದೇನೆ. ಹಿಂದಿನ ಮೂರೂವರೆ ವರ್ಷದ ಬಿಜೆಪಿ ಆಡಳಿತದ ಬಗ್ಗೆ ಮತದಾರರಲ್ಲಿ ಬೇಸರ ಮೂಡಿದೆ’ ಎಂದರು.</p>.<p>‘ಹಿರಿಯೂರು ನಗರವೂ ಒಳಗೊಂಡು ಕ್ಷೇತ್ರದ ಯಾವುದೇ ಭಾಗದ ಹಳ್ಳಿಗೆ ಹೋದರೂ ಜನರಿಂದ ಅಭೂತಪೂರ್ವ ಸ್ವಾಗತ ದೊರೆಯುತ್ತಿದೆ. ಇದನ್ನೆಲ್ಲ ಹೈಕಮಾಂಡ್ ನೋಡುತ್ತಿದೆ. ಪ್ರಯುಕ್ತ ಟಿಕೆಟ್ ವಿಷಯಕ್ಕೆ ತಲೆಕೆಡಿಸಿಕೊಳ್ಳದೆ<br />ಪ್ರಚಾರದಲ್ಲಿ ತೊಡಗಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>