<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಗುಡ್ಡದಹಳ್ಳಿ ಬಳಿ ಶನಿವಾರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಕರಡಿಯೊಂದು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮೃತಪಟ್ಟಿದೆ.</p>.<p>ಬಾಯಲ್ಲಿ ಹಲ್ಲುಗಳು ಇಲ್ಲದ ವಯಸ್ಸಾದ ಕರಡಿಯೊಂದು ಸಪೋಟ ಹಣ್ಣುಗಳನ್ನು ಹೆಚ್ಚಾಗಿ ತಿಂದು ಅಸ್ವಸ್ಥ ಸ್ಥಿತಿಯಲ್ಲಿ ಗುಡ್ಡದಹಳ್ಳಿ ಬಳಿ ಬಿದ್ದಿತ್ತು. ಗ್ರಾಮಸ್ಥರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿಕಿತ್ಸೆಗಾಗಿ ಪಟ್ಟಣದ ಸಸ್ಯಕ್ಷೇತ್ರಕ್ಕೆ ಕರೆ<br />ತಂದಿದ್ದರು.</p>.<p>ಕರಡಿಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಸ್ಯಕ್ಷೇತ್ರ ಆವರಣದಲ್ಲಿ ಶವವನ್ನು ಸುಡಲಾಯಿತು. ಅರಣ್ಯಾಧಿಕಾರಿ ಹಸನ್ ಬಾಷಾ, ಪಶು ತಾಲ್ಲೂಕು ಅಧಿಕಾರಿ ಡಾ.ತಿಮ್ಮಣ್ಣ ಮತ್ತು ಸಿಬ್ಬಂದಿ ಇದ್ದರು.</p>.<p class="Subhead">3ನೇ ಘಟನೆ: ಇದೂ ಸೇರಿ ಕಳೆದ ಒಂದು ತಿಂಗಳಲ್ಲಿ ತಾಲ್ಲೂಕಿನಲ್ಲಿ ಮೂರು ಕರಡಿಗಳು ಮೃತಪಟ್ಟಿವೆ. ರೊಪ್ಪ ಬಳಿ ಒಂದು ಕರಡಿ ಶವವಾಗಿ ಪತ್ತೆಯಾಗಿತ್ತು. ಮತ್ತೊಂದು ಕರಡಿ ದೇವಸಮುದ್ರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿತ್ತು. ಆಹಾರ, ನೀರು ಅರಸಿ ಕರಡಿಗಳು ಬರುತ್ತಿರುವ ಕಾರಣ ಘಟನೆಗಳು ನಡೆಯುತ್ತಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಗುಡ್ಡದಹಳ್ಳಿ ಬಳಿ ಶನಿವಾರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಕರಡಿಯೊಂದು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮೃತಪಟ್ಟಿದೆ.</p>.<p>ಬಾಯಲ್ಲಿ ಹಲ್ಲುಗಳು ಇಲ್ಲದ ವಯಸ್ಸಾದ ಕರಡಿಯೊಂದು ಸಪೋಟ ಹಣ್ಣುಗಳನ್ನು ಹೆಚ್ಚಾಗಿ ತಿಂದು ಅಸ್ವಸ್ಥ ಸ್ಥಿತಿಯಲ್ಲಿ ಗುಡ್ಡದಹಳ್ಳಿ ಬಳಿ ಬಿದ್ದಿತ್ತು. ಗ್ರಾಮಸ್ಥರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿಕಿತ್ಸೆಗಾಗಿ ಪಟ್ಟಣದ ಸಸ್ಯಕ್ಷೇತ್ರಕ್ಕೆ ಕರೆ<br />ತಂದಿದ್ದರು.</p>.<p>ಕರಡಿಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಸ್ಯಕ್ಷೇತ್ರ ಆವರಣದಲ್ಲಿ ಶವವನ್ನು ಸುಡಲಾಯಿತು. ಅರಣ್ಯಾಧಿಕಾರಿ ಹಸನ್ ಬಾಷಾ, ಪಶು ತಾಲ್ಲೂಕು ಅಧಿಕಾರಿ ಡಾ.ತಿಮ್ಮಣ್ಣ ಮತ್ತು ಸಿಬ್ಬಂದಿ ಇದ್ದರು.</p>.<p class="Subhead">3ನೇ ಘಟನೆ: ಇದೂ ಸೇರಿ ಕಳೆದ ಒಂದು ತಿಂಗಳಲ್ಲಿ ತಾಲ್ಲೂಕಿನಲ್ಲಿ ಮೂರು ಕರಡಿಗಳು ಮೃತಪಟ್ಟಿವೆ. ರೊಪ್ಪ ಬಳಿ ಒಂದು ಕರಡಿ ಶವವಾಗಿ ಪತ್ತೆಯಾಗಿತ್ತು. ಮತ್ತೊಂದು ಕರಡಿ ದೇವಸಮುದ್ರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿತ್ತು. ಆಹಾರ, ನೀರು ಅರಸಿ ಕರಡಿಗಳು ಬರುತ್ತಿರುವ ಕಾರಣ ಘಟನೆಗಳು ನಡೆಯುತ್ತಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>