ಸಮೀಪದ ಗುಡ್ಡ ಮತ್ತು ಕೂಡ್ಲಿಗಿ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಕರಡಿಗಳು ವಾಸವಿದ್ದು, ರಾತ್ರಿ ವೇಳೆ ಆಹಾರ, ನೀರು ಹುಡುಕಿಕೊಂಡು ನಾಡಿಗೆ ಬರುವಾಗ ಇಂತಹ ಘಟನೆಗಳು ನಡೆಯುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಕಾರು ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿತ್ತು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.