<p><strong>ಚಿತ್ರದುರ್ಗ</strong>: ‘ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ. ಫೆಬ್ರುವರಿ ಅಂತ್ಯಕ್ಕೆ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.</p>.<p>ತಾಲ್ಲೂಕಿನ ಚಿಕ್ಕಸಿದ್ದವ್ವನಹಳ್ಳಿ ಹಾಗೂ ಗೋನೂರು ಬಳಿಯ ಅಕ್ವಾಡಕ್ಟ್ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಮಾತನಾಡಿದ ಅವರು, ‘ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಹತ್ತಿರದ ವೈ ಜಂಕ್ಷನ್ನಿಂದ ಗೋನೂರು ಅಕ್ವಾಡಕ್ಟ್ವರೆಗೆ 114 ಕಿ.ಮೀ ಕಾಲುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ’ ಎಂದರು.</p>.<p>‘ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಕಡೂರಿನ 22, ಹೊಸದುರ್ಗದ 32, ಹೊಳಲ್ಕೆರೆಯ 30, ಹಿರಿಯೂರು ಹಾಗೂ ಚಿತ್ರದುರ್ಗದ ತಲಾ 3 ಸೇರಿ 90 ಕೆರೆಗಳಿಗೆ ಅವುಗಳ ಸಾಮರ್ಥ್ಯದ ಶೇ 50ರಷ್ಟು ನೀರು ತುಂಬಿಸಲಾಗುತ್ತದೆ. ಇದರಿಂದ ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕಿನ 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ದೊರಕಲಿದೆ’ ಎಂದರು.</p>.<p>‘ಗೋನೂರು ಬಳಿಯ 1.94 ಕಿ.ಮೀ. ಉದ್ದದ ಅಕ್ವಾಡಕ್ಟ್ ಕಾಮಗಾರಿಯನ್ನು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳಿಸಿ ಜಗಳೂರು, ಮೊಳಕಾಲ್ಮುರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸಲಾಗುವುದು. 120 ಅಡಿ ಎತ್ತರ ಗೋನೂರು ಅಕ್ವಾಡಕ್ಟ್ ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್ ಆಗಿದೆ’ ಹೇಳಿದರು.</p>.<p>‘ವಿಶ್ವೇಶ್ವರ ಜಲ ನಿಗಮದಿಂದ ₹2,600 ಕೋಟಿ ವೆಚ್ಚದಲ್ಲಿ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಹನಿ ನೀರಾವರಿ ಹಾಗೂ ಕೆರೆ ತುಂಬುವ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ. ಯೋಜನೆಗೆ ಕೇಂದ್ರ ಸರ್ಕಾರ 2022-23ರ ಬಜೆಟ್ನಲ್ಲಿ ಘೋಷಿಸಿದ್ದ ₹5,300 ಕೋಟಿಯನ್ನು ಬಿಡುಗಡೆ ಮಾಡಬೇಕು’ ಎಂದು ಸುಧಾಕರ್ ಆಗ್ರಹಿಸಿದರು.</p>.<p>‘ಯೋಜನೆಗಾಗಿ ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್ನಲ್ಲಿ ₹1,250 ಕೋಟಿ ಅನುದಾನ ಹಂಚಿಕೆ ಮಾಡಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಅನುದಾನವನ್ನು ನಿರೀಕ್ಷಿಸಲಾಗಿತ್ತು. ಆದರೆ ಕೇಂದ್ರದಿಂದ ಯಾವುದೇ ಅನುದಾನ ಬರಲಿಲ್ಲ. ಆದರೆ ರಾಜ್ಯ ಸರ್ಕಾರವೇ ₹1,443 ಕೋಟಿ ಬಿಡುಗಡೆ ಮಾಡಿತ್ತು. ಇದು ಬಜೆಟ್ನಲ್ಲಿ ಹಂಚಿಕೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಅನುದಾನವಾಗಿದೆ’ ಎಂದರು.</p>.<p>‘2025-26ನೇ ಸಾಲಿನಲ್ಲಿ ₹1,440.29 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಇದುವರೆಗೂ ₹520 ಕೋಟಿ ಬಿಡುಗಡೆಯಾಗಿದೆ. ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನೂ 3 ತಿಂಗಳು ಬಾಕಿ ಇದ್ದು, ಉಳಿದ ಹಣವನ್ನು ಸಹ ಸರ್ಕಾರ ಬಿಡುಗಡೆ ಮಾಡಲಿದೆ’ ಎಂದು ತಿಳಿಸಿದರು.</p>.<div><blockquote>ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಲು ಕೋರಲಾಗುತ್ತದೆ. ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗರಿಗೆ ಅಗತ್ಯವಿರುವ ₹ 300 ಕೋಟಿಯನ್ನು ಮಾರ್ಚ್ ಅಂತ್ಯದೊಳಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು.</blockquote><span class="attribution"> ಡಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ</span></div>.<p>‘ಯೋಜನೆ ಪೂರ್ಣಗೊಳ್ಳಲು ಇನ್ನೂ ₹10,000 ಕೋಟಿ ಅಗತ್ಯವಿದೆ. ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು’ ಎಂದು ವಿವರಿಸಿದರು.</p>.<p>ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಮುಖ್ಯ ಎಂಜಿನಿಯರ್ ಎಫ್.ಎಚ್.ಲಮಾಣಿ, ಅಧೀಕ್ಷಕ ಎಂಜಿನಿಯರ್ ಕೆ.ಟಿ.ಹರೀಶ್, ಕಾರ್ಯಪಾಲಕ ಎಂಜಿನಿಯರ್ ಚಂದ್ರಪ್ಪ ಬಾರಿಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ. ಫೆಬ್ರುವರಿ ಅಂತ್ಯಕ್ಕೆ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.</p>.<p>ತಾಲ್ಲೂಕಿನ ಚಿಕ್ಕಸಿದ್ದವ್ವನಹಳ್ಳಿ ಹಾಗೂ ಗೋನೂರು ಬಳಿಯ ಅಕ್ವಾಡಕ್ಟ್ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಮಾತನಾಡಿದ ಅವರು, ‘ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಹತ್ತಿರದ ವೈ ಜಂಕ್ಷನ್ನಿಂದ ಗೋನೂರು ಅಕ್ವಾಡಕ್ಟ್ವರೆಗೆ 114 ಕಿ.ಮೀ ಕಾಲುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ’ ಎಂದರು.</p>.<p>‘ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಕಡೂರಿನ 22, ಹೊಸದುರ್ಗದ 32, ಹೊಳಲ್ಕೆರೆಯ 30, ಹಿರಿಯೂರು ಹಾಗೂ ಚಿತ್ರದುರ್ಗದ ತಲಾ 3 ಸೇರಿ 90 ಕೆರೆಗಳಿಗೆ ಅವುಗಳ ಸಾಮರ್ಥ್ಯದ ಶೇ 50ರಷ್ಟು ನೀರು ತುಂಬಿಸಲಾಗುತ್ತದೆ. ಇದರಿಂದ ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕಿನ 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ದೊರಕಲಿದೆ’ ಎಂದರು.</p>.<p>‘ಗೋನೂರು ಬಳಿಯ 1.94 ಕಿ.ಮೀ. ಉದ್ದದ ಅಕ್ವಾಡಕ್ಟ್ ಕಾಮಗಾರಿಯನ್ನು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳಿಸಿ ಜಗಳೂರು, ಮೊಳಕಾಲ್ಮುರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸಲಾಗುವುದು. 120 ಅಡಿ ಎತ್ತರ ಗೋನೂರು ಅಕ್ವಾಡಕ್ಟ್ ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್ ಆಗಿದೆ’ ಹೇಳಿದರು.</p>.<p>‘ವಿಶ್ವೇಶ್ವರ ಜಲ ನಿಗಮದಿಂದ ₹2,600 ಕೋಟಿ ವೆಚ್ಚದಲ್ಲಿ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಹನಿ ನೀರಾವರಿ ಹಾಗೂ ಕೆರೆ ತುಂಬುವ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ. ಯೋಜನೆಗೆ ಕೇಂದ್ರ ಸರ್ಕಾರ 2022-23ರ ಬಜೆಟ್ನಲ್ಲಿ ಘೋಷಿಸಿದ್ದ ₹5,300 ಕೋಟಿಯನ್ನು ಬಿಡುಗಡೆ ಮಾಡಬೇಕು’ ಎಂದು ಸುಧಾಕರ್ ಆಗ್ರಹಿಸಿದರು.</p>.<p>‘ಯೋಜನೆಗಾಗಿ ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್ನಲ್ಲಿ ₹1,250 ಕೋಟಿ ಅನುದಾನ ಹಂಚಿಕೆ ಮಾಡಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಅನುದಾನವನ್ನು ನಿರೀಕ್ಷಿಸಲಾಗಿತ್ತು. ಆದರೆ ಕೇಂದ್ರದಿಂದ ಯಾವುದೇ ಅನುದಾನ ಬರಲಿಲ್ಲ. ಆದರೆ ರಾಜ್ಯ ಸರ್ಕಾರವೇ ₹1,443 ಕೋಟಿ ಬಿಡುಗಡೆ ಮಾಡಿತ್ತು. ಇದು ಬಜೆಟ್ನಲ್ಲಿ ಹಂಚಿಕೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಅನುದಾನವಾಗಿದೆ’ ಎಂದರು.</p>.<p>‘2025-26ನೇ ಸಾಲಿನಲ್ಲಿ ₹1,440.29 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಇದುವರೆಗೂ ₹520 ಕೋಟಿ ಬಿಡುಗಡೆಯಾಗಿದೆ. ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನೂ 3 ತಿಂಗಳು ಬಾಕಿ ಇದ್ದು, ಉಳಿದ ಹಣವನ್ನು ಸಹ ಸರ್ಕಾರ ಬಿಡುಗಡೆ ಮಾಡಲಿದೆ’ ಎಂದು ತಿಳಿಸಿದರು.</p>.<div><blockquote>ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಲು ಕೋರಲಾಗುತ್ತದೆ. ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗರಿಗೆ ಅಗತ್ಯವಿರುವ ₹ 300 ಕೋಟಿಯನ್ನು ಮಾರ್ಚ್ ಅಂತ್ಯದೊಳಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು.</blockquote><span class="attribution"> ಡಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ</span></div>.<p>‘ಯೋಜನೆ ಪೂರ್ಣಗೊಳ್ಳಲು ಇನ್ನೂ ₹10,000 ಕೋಟಿ ಅಗತ್ಯವಿದೆ. ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು’ ಎಂದು ವಿವರಿಸಿದರು.</p>.<p>ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಮುಖ್ಯ ಎಂಜಿನಿಯರ್ ಎಫ್.ಎಚ್.ಲಮಾಣಿ, ಅಧೀಕ್ಷಕ ಎಂಜಿನಿಯರ್ ಕೆ.ಟಿ.ಹರೀಶ್, ಕಾರ್ಯಪಾಲಕ ಎಂಜಿನಿಯರ್ ಚಂದ್ರಪ್ಪ ಬಾರಿಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>