<p><strong>ಚಳ್ಳಕೆರೆ:</strong> ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ₹ 5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫೆ.23 ರಂದು ಸಂಸದ ಗೋವಿಂದ ಕಾರಜೋಳ ಅವರ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ರೈತ ಸಂಘದ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹೇಳಿದರು.</p>.<p>ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>.<p>ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಸಂಸದರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರದ ಜೊತೆ ಸಂಸದ ಗೋವಿಂದ ಕಾರಜೋಳ ಮಾತನಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಬೇಕು. ಇಲ್ಲವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜಿಲ್ಲೆಯ ಶಾಸಕರು ರಾಜ್ಯ ಸರ್ಕಾರ ಬಜೆಟ್ನಲ್ಲಿ ₹ 5,000 ಕೋಟಿ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವ ನಾಟಕ ಆಡುತ್ತಿದ್ದಾರೆ. ಶಾಸಕರು ಬರೀ ಪ್ರಚಾರ ಪಡೆದರೆ ಸಾಲದು ಅನುದಾನ ಬಿಡುಗಡೆ ಮಾಡಿಸುವ ಬದ್ದತೆ ಇರಬೇಕು ಎಂದು ಕಿಡಿ ಕಾರಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಜಣ್ಣ, ಸದಸ್ಯರಾದ ಶ್ರೀಕಂಠಮೂರ್ತಿ, ಮಹೇಶ್, ಜಿ.ಎಚ್. ಹನುಮಂತಪ್ಪ, ಸಣ್ಣ ಪಾಲಯ್ಯ, ಮೈರಾಡ ಚಂದ್ರಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ₹ 5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫೆ.23 ರಂದು ಸಂಸದ ಗೋವಿಂದ ಕಾರಜೋಳ ಅವರ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ರೈತ ಸಂಘದ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹೇಳಿದರು.</p>.<p>ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>.<p>ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಸಂಸದರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರದ ಜೊತೆ ಸಂಸದ ಗೋವಿಂದ ಕಾರಜೋಳ ಮಾತನಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಬೇಕು. ಇಲ್ಲವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜಿಲ್ಲೆಯ ಶಾಸಕರು ರಾಜ್ಯ ಸರ್ಕಾರ ಬಜೆಟ್ನಲ್ಲಿ ₹ 5,000 ಕೋಟಿ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವ ನಾಟಕ ಆಡುತ್ತಿದ್ದಾರೆ. ಶಾಸಕರು ಬರೀ ಪ್ರಚಾರ ಪಡೆದರೆ ಸಾಲದು ಅನುದಾನ ಬಿಡುಗಡೆ ಮಾಡಿಸುವ ಬದ್ದತೆ ಇರಬೇಕು ಎಂದು ಕಿಡಿ ಕಾರಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಜಣ್ಣ, ಸದಸ್ಯರಾದ ಶ್ರೀಕಂಠಮೂರ್ತಿ, ಮಹೇಶ್, ಜಿ.ಎಚ್. ಹನುಮಂತಪ್ಪ, ಸಣ್ಣ ಪಾಲಯ್ಯ, ಮೈರಾಡ ಚಂದ್ರಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>