<p><strong>ಚಿತ್ರದುರ್ಗ:</strong> ‘ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ’ ಎಂದು ಆರೋಪಿಸಿ ರೈತಸಂಘ ಮತ್ತು ಹಸಿರು ಸೇನೆ ಮಂಗಳವಾರ ಕರೆ ನೀಡಿದ್ದ ಹಿರಿಯೂರು, ಹೊಳಲ್ಕೆರೆ, ಮೊಳಕಾಲ್ಮುರು, ಹೊಸದುರ್ಗ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. </p>.<p>‘ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಬಜೆಟ್ನಲ್ಲಿ ಘೋಷಿಸಿದ್ದ ₹ 5,300 ಕೋಟಿ ಅನುದಾನವನ್ನೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಕಳೆದ ಬಜೆಟ್ನಲ್ಲಿ ಘೋಷಿಸಿದ್ದ ಅನುದಾನವನ್ನು ಎತ್ತಿನಹೊಳೆ ಯೋಜನೆಗೆ ವರ್ಗಾಯಿಸಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.</p>.<p>‘ಸರ್ಕಾರಗಳು ಅನುದಾನ ಬಿಡುಗಡೆ ಮಾಡದ ಕಾರಣ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಕಾಮಗಾರಿ ವಿಳಂಬವಾಗುತ್ತಿದೆ. ಯೋಜನಾ ವೆಚ್ಚವೂ ಹೆಚ್ಚುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಿಕ್ಕಾಟದಲ್ಲಿ ಜಿಲ್ಲೆಯ ಜನರು ಬಸವಳಿದಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕೂಡಲೇ ಯೋಜನೆಯ ಜಾರಿಗೆ ಹಸಿರು ನಿಶಾನೆ ತೋರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಅವರು ಎಚ್ಚರಿಸಿದರು. </p>.<p>ಶಾಲೆ– ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ವ್ಯಾಪಾರಿಗಳು ವಹಿವಾಟು ಬಂದ್ ಮಾಡಿದ್ದರು. ಹಿರಿಯೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. </p>.<p>ಹೊಳಲ್ಕೆರೆಯಲ್ಲಿ ರೈತರು ರಸ್ತೆಯಲ್ಲಿ ಎತ್ತಿನ ಗಾಡಿ, ಟ್ರ್ಯಾಕ್ಟರ್ ನಿಲ್ಲಿಸಿ ಪ್ರತಿಭಟಿಸಿದರು. ಮೊಳಕಾಲ್ಮುರು ಪಟ್ಟಣದಲ್ಲಿ ರೈತರ ಬಂಧನ ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಹೊಸದುರ್ಗ ತಾಲ್ಲೂಕಿನ ಕೆರೆಗಳಿಗೆ ಭದ್ರಾ ನೀರು ಹರಿಸಬೇಕು ಎಂದು ಒತ್ತಾಯಿಸಿ ಬಂದ್ ಆಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ’ ಎಂದು ಆರೋಪಿಸಿ ರೈತಸಂಘ ಮತ್ತು ಹಸಿರು ಸೇನೆ ಮಂಗಳವಾರ ಕರೆ ನೀಡಿದ್ದ ಹಿರಿಯೂರು, ಹೊಳಲ್ಕೆರೆ, ಮೊಳಕಾಲ್ಮುರು, ಹೊಸದುರ್ಗ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. </p>.<p>‘ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಬಜೆಟ್ನಲ್ಲಿ ಘೋಷಿಸಿದ್ದ ₹ 5,300 ಕೋಟಿ ಅನುದಾನವನ್ನೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಕಳೆದ ಬಜೆಟ್ನಲ್ಲಿ ಘೋಷಿಸಿದ್ದ ಅನುದಾನವನ್ನು ಎತ್ತಿನಹೊಳೆ ಯೋಜನೆಗೆ ವರ್ಗಾಯಿಸಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.</p>.<p>‘ಸರ್ಕಾರಗಳು ಅನುದಾನ ಬಿಡುಗಡೆ ಮಾಡದ ಕಾರಣ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಕಾಮಗಾರಿ ವಿಳಂಬವಾಗುತ್ತಿದೆ. ಯೋಜನಾ ವೆಚ್ಚವೂ ಹೆಚ್ಚುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಿಕ್ಕಾಟದಲ್ಲಿ ಜಿಲ್ಲೆಯ ಜನರು ಬಸವಳಿದಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕೂಡಲೇ ಯೋಜನೆಯ ಜಾರಿಗೆ ಹಸಿರು ನಿಶಾನೆ ತೋರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಅವರು ಎಚ್ಚರಿಸಿದರು. </p>.<p>ಶಾಲೆ– ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ವ್ಯಾಪಾರಿಗಳು ವಹಿವಾಟು ಬಂದ್ ಮಾಡಿದ್ದರು. ಹಿರಿಯೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. </p>.<p>ಹೊಳಲ್ಕೆರೆಯಲ್ಲಿ ರೈತರು ರಸ್ತೆಯಲ್ಲಿ ಎತ್ತಿನ ಗಾಡಿ, ಟ್ರ್ಯಾಕ್ಟರ್ ನಿಲ್ಲಿಸಿ ಪ್ರತಿಭಟಿಸಿದರು. ಮೊಳಕಾಲ್ಮುರು ಪಟ್ಟಣದಲ್ಲಿ ರೈತರ ಬಂಧನ ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಹೊಸದುರ್ಗ ತಾಲ್ಲೂಕಿನ ಕೆರೆಗಳಿಗೆ ಭದ್ರಾ ನೀರು ಹರಿಸಬೇಕು ಎಂದು ಒತ್ತಾಯಿಸಿ ಬಂದ್ ಆಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>