ವೇದಾವತಿ ನದಿ ಪಾತ್ರದ ಹಳ್ಳಿಗಳಾದ ಬೇಗೂರು, ಕಲ್ಕೆರೆ, ಚೌಳ ಹಿರಿಯೂರು, ಕುಕ್ಕೆಸಮುದ್ರ, ಬಲ್ಲಾಳ ಸಮುದ್ರ, ಮೆಟ್ಟಿನಹೊಳೆ, ಕೆಲ್ಲೋಡು, ಲಿಂಗದಹಳ್ಳಿ, ಕಾರೆಹಳ್ಳಿ, ಹತ್ತಿಮೊಗ್ಗೆ, ಬೇವಿನಹಳ್ಳಿ ಮೂಲಕ ಸಾಗುವ ನೀರು ವಿ.ವಿ.ಸಾಗರ ತಲುಪಲಿದೆ. ಹೀಗಾಗಿ, ಕಾಲುವೆ ಮತ್ತು ನದಿಪಾತ್ರದ ಜನರು ಎಚ್ಚರಿಕೆ ಇರುವಂತೆ ನಿಗಮದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.