<p>ಚಿತ್ರದುರ್ಗ: ಭಕ್ತಿ ಎಂಬ ಲೋಕಕ್ಕೆ ಕರೆದೊಯ್ಯುವ ಭಜನೆ ಕೆಲ ಕ್ಷಣ ಎಂಥವರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಅದೇ ರೀತಿ ಎರಡು ಗಂಟೆವರೆಗೂ ಬಸವ ಅನುಯಾಯಿಗಳನ್ನು ಭಜನಾ ತಂಡಗಳು ಪರವಶ ಮಾಡಿಕೊಂಡವು.</p>.<p>ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮುರುಗಿಯ ಶಾಂತವೀರಸ್ವಾಮಿ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ‘ರಾಜ್ಯಮಟ್ಟದ ಭಜನಾ ಸ್ಪರ್ಧೆ’ ನೆರೆದಿದ್ದವರನ್ನು ಸೆಳೆಯುವಲ್ಲಿ ಸಫಲವಾಯಿತು.</p>.<p>ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಜೋಯಿಸರ ಹರಳಹಳ್ಳಿಯ ಬಸವೇಶ್ವರ ಭಜನಾ ಕಲಾ ತಂಡದ ಚನ್ನೆಗೌಡ ಮತ್ತು ಸಂಗಡಿಗರು ಉತ್ತಮ ಪ್ರದರ್ಶನ ನೀಡಿದರು. ಈ ಮೂಲಕ<br />₹ 15 ಸಾವಿರ ನಗದು, ಪಾರಿತೋಷಕದೊಂದಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮುಡಿಗೇರಿಸಿಕೊಂಡರು.</p>.<p class="Subhead">ಭಜನೆಯಿಂದ ಶಾಂತಿ, ನೆಮ್ಮದಿ: ನೇತೃತ್ವವಹಿಸಿದ್ದ ಚಿಗರಹಳ್ಳಿ ಮರುಳಶಂಕರದೇವರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ, ‘ಬದುಕಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಮನಸು ಶುದ್ಧೀಕರಿಸಿಕೊಳ್ಳಲು ಭಜನೆಯಿಂದ ಸಾಧ್ಯವಿದೆ. ಭಜನೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಇಂತಹ ಕಲೆ ಉಳಿಯಲು ಮುರುಘಾಮಠ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರ’ ಎಂದರು.</p>.<p>‘ಬಯಸಿ ಬಂದಿದ್ದು ಅಂಗ ಭೋಗ, ಬಯಸದೆ ಬಂದಿದ್ದು ಲಿಂಗ ಭೋಗ ಎಂಬುದಕ್ಕೆ ಇಂತಹ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದ ಅವರು, ಪ್ರಸ್ತುತ ದಿನಗಳಲ್ಲಿ ಭಜನೆ ಕುರಿತು ಆಸಕ್ತಿ ಕಡಿಮೆ ಆಗುತ್ತಿದೆ. ಈ ಕಲೆಯ ಪುನಶ್ಚೇತನಕ್ಕೆ ಪ್ರೋತ್ಸಾಹದ ಅಗತ್ಯ ತುಂಬಾ ಇದೆ’ ಎಂದು ಅಭಿಪ್ರಾಯಪಟ್ಟರು.</p>.<p>ಅಸಿಸ್ಟೆಂಟ್ ಕಮಿಷನರ್ ಚಂದ್ರಯ್ಯ, ‘ಭಜನೆ ದೇವರನ್ನು ಸ್ಮರಿಸುವ ಕಲೆಯಾಗಿ ಹಳ್ಳಿಗಳಲ್ಲಿ ಹಿಂದೆಲ್ಲಾ<br />ಪ್ರಚಲಿತದಲ್ಲಿತ್ತು. ಆದರೆ, ಕಾಲಕ್ರಮೇಣ ನಗರ, ಪಟ್ಟಣಕ್ಕೂ ವಿಸ್ತಾರವಾಯಿತು. ಇಂತಹ ಕಲೆಯನ್ನು ಪೋಷಿಸಿ, ಬೆಳೆಸಿದಾಗ ಮಾತ್ರ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಯಲು ಸಾಧ್ಯ’ ಎಂದರು.</p>.<p>ಉತ್ಸವ ಸಮಿತಿ ಗೌರವಾಧ್ಯಕ್ಷ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕಾರ್ಯಾಧ್ಯಕ್ಷ ಕೆ.ಎಸ್. ನವೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಭಕ್ತಿ ಎಂಬ ಲೋಕಕ್ಕೆ ಕರೆದೊಯ್ಯುವ ಭಜನೆ ಕೆಲ ಕ್ಷಣ ಎಂಥವರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಅದೇ ರೀತಿ ಎರಡು ಗಂಟೆವರೆಗೂ ಬಸವ ಅನುಯಾಯಿಗಳನ್ನು ಭಜನಾ ತಂಡಗಳು ಪರವಶ ಮಾಡಿಕೊಂಡವು.</p>.<p>ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮುರುಗಿಯ ಶಾಂತವೀರಸ್ವಾಮಿ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ‘ರಾಜ್ಯಮಟ್ಟದ ಭಜನಾ ಸ್ಪರ್ಧೆ’ ನೆರೆದಿದ್ದವರನ್ನು ಸೆಳೆಯುವಲ್ಲಿ ಸಫಲವಾಯಿತು.</p>.<p>ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಜೋಯಿಸರ ಹರಳಹಳ್ಳಿಯ ಬಸವೇಶ್ವರ ಭಜನಾ ಕಲಾ ತಂಡದ ಚನ್ನೆಗೌಡ ಮತ್ತು ಸಂಗಡಿಗರು ಉತ್ತಮ ಪ್ರದರ್ಶನ ನೀಡಿದರು. ಈ ಮೂಲಕ<br />₹ 15 ಸಾವಿರ ನಗದು, ಪಾರಿತೋಷಕದೊಂದಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮುಡಿಗೇರಿಸಿಕೊಂಡರು.</p>.<p class="Subhead">ಭಜನೆಯಿಂದ ಶಾಂತಿ, ನೆಮ್ಮದಿ: ನೇತೃತ್ವವಹಿಸಿದ್ದ ಚಿಗರಹಳ್ಳಿ ಮರುಳಶಂಕರದೇವರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ, ‘ಬದುಕಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಮನಸು ಶುದ್ಧೀಕರಿಸಿಕೊಳ್ಳಲು ಭಜನೆಯಿಂದ ಸಾಧ್ಯವಿದೆ. ಭಜನೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಇಂತಹ ಕಲೆ ಉಳಿಯಲು ಮುರುಘಾಮಠ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರ’ ಎಂದರು.</p>.<p>‘ಬಯಸಿ ಬಂದಿದ್ದು ಅಂಗ ಭೋಗ, ಬಯಸದೆ ಬಂದಿದ್ದು ಲಿಂಗ ಭೋಗ ಎಂಬುದಕ್ಕೆ ಇಂತಹ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದ ಅವರು, ಪ್ರಸ್ತುತ ದಿನಗಳಲ್ಲಿ ಭಜನೆ ಕುರಿತು ಆಸಕ್ತಿ ಕಡಿಮೆ ಆಗುತ್ತಿದೆ. ಈ ಕಲೆಯ ಪುನಶ್ಚೇತನಕ್ಕೆ ಪ್ರೋತ್ಸಾಹದ ಅಗತ್ಯ ತುಂಬಾ ಇದೆ’ ಎಂದು ಅಭಿಪ್ರಾಯಪಟ್ಟರು.</p>.<p>ಅಸಿಸ್ಟೆಂಟ್ ಕಮಿಷನರ್ ಚಂದ್ರಯ್ಯ, ‘ಭಜನೆ ದೇವರನ್ನು ಸ್ಮರಿಸುವ ಕಲೆಯಾಗಿ ಹಳ್ಳಿಗಳಲ್ಲಿ ಹಿಂದೆಲ್ಲಾ<br />ಪ್ರಚಲಿತದಲ್ಲಿತ್ತು. ಆದರೆ, ಕಾಲಕ್ರಮೇಣ ನಗರ, ಪಟ್ಟಣಕ್ಕೂ ವಿಸ್ತಾರವಾಯಿತು. ಇಂತಹ ಕಲೆಯನ್ನು ಪೋಷಿಸಿ, ಬೆಳೆಸಿದಾಗ ಮಾತ್ರ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಯಲು ಸಾಧ್ಯ’ ಎಂದರು.</p>.<p>ಉತ್ಸವ ಸಮಿತಿ ಗೌರವಾಧ್ಯಕ್ಷ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕಾರ್ಯಾಧ್ಯಕ್ಷ ಕೆ.ಎಸ್. ನವೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>