<p>ಭಾನುವಳ್ಳಿ (ಕಡರನಾಯ್ಕನಹಳ್ಳಿ): ಭಾನುವಳ್ಳಿ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದಲ್ಲಿ ಗ್ರಾಹಕರು ಸಿಲಿಂಡರ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.</p>.<p>ಬುಕ್ ಮಾಡಿದವರಿಗೆ ಸಿಲಿಂಡರ್ಗಳು ದೊರೆಯದ ಕಾರಣ ಅಡುಗೆ ಮಾಡಲು ಸಮಸ್ಯೆಯಾಗಿದೆ ಎಂದು ಗ್ರಾಹಕರು ದೂರಿದರು.</p>.<p>‘ಎಚ್ಪಿ ಗ್ಯಾಸ್ ಸಿಲಿಂಡರ್ಗಳೂ ವಿತರಣೆ ಆಗಿಲ್ಲ. ಸಿಲಿಂಡರ್ ಬುಕ್ ಮಾಡಿದ ಗ್ರಾಹಕರು ಗ್ರಾಮಗಳ ರಸ್ತೆ ಬದಿಗಳಲ್ಲಿ ಕಾಯುತ್ತಿದ್ದಾರೆ. ಒಂದು ವಾರದಿಂದ ಸಿಲಿಂಡರ್ಗಳು ಬಂದಿಲ್ಲ. ಸಿಲಿಂಡರ್ ವಿತರಿಸುವವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಕಚೇರಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ’ ಎಂದು ಗ್ರಾಹಕರೊಬ್ಬರು ದೂರಿದರು.</p>.<p>ಕಡರನಾಯ್ಕನಹಳ್ಳಿ, ವಾಸನ, ನಂದಿಗುಡಿ, ಗೋವಿನಹಾಳು ಮುಂತಾದ ಗ್ರಾಮಗಳಲ್ಲೂ ಇದೇ ಪರಿಸ್ಥಿತಿ ಇದೆ. ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಲು ಭಾನುವಳ್ಳಿ ಪ್ರಕಾಶ್, ಯಕ್ಕೆಗೊಂದಿ ರುದ್ರಗೌಡ, ಕಡರನಾಯ್ಕನಹಳ್ಳಿ ಎಂ.ಎನ್. ವೆಂಕಟೇಶ್ ಮುಂತಾದವರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-43-1303878934</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾನುವಳ್ಳಿ (ಕಡರನಾಯ್ಕನಹಳ್ಳಿ): ಭಾನುವಳ್ಳಿ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದಲ್ಲಿ ಗ್ರಾಹಕರು ಸಿಲಿಂಡರ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.</p>.<p>ಬುಕ್ ಮಾಡಿದವರಿಗೆ ಸಿಲಿಂಡರ್ಗಳು ದೊರೆಯದ ಕಾರಣ ಅಡುಗೆ ಮಾಡಲು ಸಮಸ್ಯೆಯಾಗಿದೆ ಎಂದು ಗ್ರಾಹಕರು ದೂರಿದರು.</p>.<p>‘ಎಚ್ಪಿ ಗ್ಯಾಸ್ ಸಿಲಿಂಡರ್ಗಳೂ ವಿತರಣೆ ಆಗಿಲ್ಲ. ಸಿಲಿಂಡರ್ ಬುಕ್ ಮಾಡಿದ ಗ್ರಾಹಕರು ಗ್ರಾಮಗಳ ರಸ್ತೆ ಬದಿಗಳಲ್ಲಿ ಕಾಯುತ್ತಿದ್ದಾರೆ. ಒಂದು ವಾರದಿಂದ ಸಿಲಿಂಡರ್ಗಳು ಬಂದಿಲ್ಲ. ಸಿಲಿಂಡರ್ ವಿತರಿಸುವವರು ಕರೆಯನ್ನು ಸ್ವೀಕರಿಸುತ್ತಿಲ್ಲ. ಕಚೇರಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ’ ಎಂದು ಗ್ರಾಹಕರೊಬ್ಬರು ದೂರಿದರು.</p>.<p>ಕಡರನಾಯ್ಕನಹಳ್ಳಿ, ವಾಸನ, ನಂದಿಗುಡಿ, ಗೋವಿನಹಾಳು ಮುಂತಾದ ಗ್ರಾಮಗಳಲ್ಲೂ ಇದೇ ಪರಿಸ್ಥಿತಿ ಇದೆ. ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಲು ಭಾನುವಳ್ಳಿ ಪ್ರಕಾಶ್, ಯಕ್ಕೆಗೊಂದಿ ರುದ್ರಗೌಡ, ಕಡರನಾಯ್ಕನಹಳ್ಳಿ ಎಂ.ಎನ್. ವೆಂಕಟೇಶ್ ಮುಂತಾದವರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-43-1303878934</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>