ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ ಗಿರಿ ಮಹಾರಾಜ್, ‘ಆಶ್ರಮ, ದೇವಾಲಯಗಳು ಧರ್ಮವನ್ನುಳಿಸುವ ತಾಣಗಳು. ಯಾರು ಧರ್ಮವನ್ನು ರಕ್ಷಿಸಿ ಪೋಷಿಸುತ್ತಾರೋ ಅಲ್ಲಿ ಯಾವುದೇ ಸಂಕಷ್ಟಗಳು ಎದುರಾಗುವುದಿಲ್ಲ.ಕರ್ನಾಟಕ ಧರ್ಮ ರಕ್ಷಣೆಯಲ್ಲಿ ಮಹತ್ವ ಪಾತ್ರ ನೀಡಿದೆ. ಮಠ–ಮಂದಿರಗಳ ನೆಲೆಬೀಡಾಗಿದೆ. ಎರಡು ವರ್ಷಗಳ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಬರುತ್ತದೆ ಎಂದು ಸಾಧುಗಳು ಭವಿಷ್ಯ ನುಡಿದಿದ್ದರು. ಇದು ನಿಜವಾಯಿತು. ಸಿದ್ದರಾಮಯ್ಯ, ವಿಜಯೇಂದ್ರ, ರಾಘವೇಂದ್ರರಿಗೂ ಆಶೀರ್ವದಿಸಲಾಗಿತ್ತು’ ಎಂದು ಹೇಳಿದರು.