‘ಇವಿಎಂ ಬಳಸಿ ನಡೆಸುವ ಚುನಾವಣಾ ವ್ಯವಸ್ಥೆಯನ್ನು ಜನ ನಂಬುತ್ತಿಲ್ಲ. ಬೆಂಗಳೂರಿನಲ್ಲಿ ಮತದಾರರ ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿರುವುದು, ಕರ್ನಾಟಕದಲ್ಲಿ ಚುನಾವಣಾ ಪ್ರಕ್ರಿಯೆ ಎಂತಹ ಅಧೋಗತಿಗೆ ತಲುಪಿದೆ ಎಂಬುದನ್ನು ತೋರುತ್ತದೆ. ಹೇಗಾದರೂ ಮಾಡಿ ಚುನಾವಣೆ ಗೆಲ್ಲಬೇಕು ಎಂಬ ಕಾಂಗ್ರೆಸ್ ತತ್ವವನ್ನೇ ಬಿಜೆಪಿ ಈಗ ಅಳವಡಿಸಿಕೊಂಡಿದೆ’ ಎಂದು ತನ್ನ ಮುಖವಾಣಿ ‘ಸಾಮ್ನಾ’ದಲ್ಲಿ ಶಿವಸೇನಾ ವ್ಯಂಗ್ಯವಾಡಿದೆ.